‘ಟ್ರಸ್ಟ್ ಸದಸ್ಯರು ಜುಲೈ 18 ರಂದು ಅಯೋಧ್ಯೆಯಲ್ಲಿ ಸಭೆ ಸೇರಲಿದ್ದಾರೆ. ಮಂದಿರ ನಿರ್ಮಾಣದ ಬಗ್ಗೆ ಚರ್ಚಿಸುವುದು ಸಭೆಯ ಉದ್ದೇಶವಾಗಿದ್ದು, ನಿರ್ಮಾಣ ಕಾರ್ಯ ಆರಂಭವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರೂ ಒಮ್ಮೆ ಭೇಟಿ ಮಾಡಬೇಕೆಂಬುದು ನಮ್ಮ ಬಯಕೆಯಾಗಿದೆ’ ಎಂದು ಅವರು ಹೇಳಿದ್ದಾರೆ.
ಈ ಮೊದಲು ಟ್ರಸ್ಟ್ ಸದಸ್ಯಗೋಪಾಲ್ ದಾಸ್ ಅವರು, ಅಯೋಧ್ಯೆಯಲ್ಲಿ ದೇವಾಲಯದ ಸ್ಥಳದಲ್ಲಿ ನಿರ್ಮಾಣ ಕಾರ್ಯಗಳನ್ನು ಉದ್ಘಾಟಿಸುವಂತೆ ಪ್ರಧಾನಿಯವರನ್ನು ಕೋರಿದ್ದೇವೆ ಎಂದು ಹೇಳಿದ್ದರು.