<p><strong>ಅಯೋಧ್ಯೆ</strong>: ರಾಮ ಮಂದಿರ ನಿರ್ಮಾಣ ಸಂಬಂಧ ಚರ್ಚಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರು ಜುಲೈ 18 ರಂದು ಸಭೆ ಸೇರಲಿದ್ದಾರೆ ಎಂದು ಟ್ರಸ್ಟ್ನ ಅಧ್ಯಕ್ಷ ಕಮಲ್ ನಯನ್ ದಾಸ್ ಶುಕ್ರವಾರ ಹೇಳಿದ್ದಾರೆ.</p>.<p>‘ಟ್ರಸ್ಟ್ ಸದಸ್ಯರು ಜುಲೈ 18 ರಂದು ಅಯೋಧ್ಯೆಯಲ್ಲಿ ಸಭೆ ಸೇರಲಿದ್ದಾರೆ. ಮಂದಿರ ನಿರ್ಮಾಣದ ಬಗ್ಗೆ ಚರ್ಚಿಸುವುದು ಸಭೆಯ ಉದ್ದೇಶವಾಗಿದ್ದು, ನಿರ್ಮಾಣ ಕಾರ್ಯ ಆರಂಭವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರೂ ಒಮ್ಮೆ ಭೇಟಿ ಮಾಡಬೇಕೆಂಬುದು ನಮ್ಮ ಬಯಕೆಯಾಗಿದೆ’ ಎಂದು ಅವರು ಹೇಳಿದ್ದಾರೆ.<br /><br />ಈ ಮೊದಲು ಟ್ರಸ್ಟ್ ಸದಸ್ಯಗೋಪಾಲ್ ದಾಸ್ ಅವರು, ಅಯೋಧ್ಯೆಯಲ್ಲಿ ದೇವಾಲಯದ ಸ್ಥಳದಲ್ಲಿ ನಿರ್ಮಾಣ ಕಾರ್ಯಗಳನ್ನು ಉದ್ಘಾಟಿಸುವಂತೆ ಪ್ರಧಾನಿಯವರನ್ನು ಕೋರಿದ್ದೇವೆ ಎಂದು ಹೇಳಿದ್ದರು.</p>.<p>‘ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯಗಳನ್ನು ಉದ್ಘಾಟಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇವೆ. ಪೂಜಾ ಕಾರ್ಯಗಳು ಮೂರು ತಿಂಗಳಿನಿಂದ ನಡೆಯುತ್ತಿವೆ’ ಎಂದು ತಿಳಿಸಿದ್ದರು.</p>.<p>ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದ್ದ ಸುಪ್ರೀಂ, ಮೂರು ತಿಂಗಳೊಳಗೆ ಟ್ರಸ್ಟ್ ರಚಿಸಿ ಮಂದಿರದ ನಿವೇಶನವನ್ನು ಅದಕ್ಕೆ ಒಪ್ಪಿಸಬೇಕು ಎಂದುನವೆಂಬರ್ 9 ರಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ</strong>: ರಾಮ ಮಂದಿರ ನಿರ್ಮಾಣ ಸಂಬಂಧ ಚರ್ಚಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರು ಜುಲೈ 18 ರಂದು ಸಭೆ ಸೇರಲಿದ್ದಾರೆ ಎಂದು ಟ್ರಸ್ಟ್ನ ಅಧ್ಯಕ್ಷ ಕಮಲ್ ನಯನ್ ದಾಸ್ ಶುಕ್ರವಾರ ಹೇಳಿದ್ದಾರೆ.</p>.<p>‘ಟ್ರಸ್ಟ್ ಸದಸ್ಯರು ಜುಲೈ 18 ರಂದು ಅಯೋಧ್ಯೆಯಲ್ಲಿ ಸಭೆ ಸೇರಲಿದ್ದಾರೆ. ಮಂದಿರ ನಿರ್ಮಾಣದ ಬಗ್ಗೆ ಚರ್ಚಿಸುವುದು ಸಭೆಯ ಉದ್ದೇಶವಾಗಿದ್ದು, ನಿರ್ಮಾಣ ಕಾರ್ಯ ಆರಂಭವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರೂ ಒಮ್ಮೆ ಭೇಟಿ ಮಾಡಬೇಕೆಂಬುದು ನಮ್ಮ ಬಯಕೆಯಾಗಿದೆ’ ಎಂದು ಅವರು ಹೇಳಿದ್ದಾರೆ.<br /><br />ಈ ಮೊದಲು ಟ್ರಸ್ಟ್ ಸದಸ್ಯಗೋಪಾಲ್ ದಾಸ್ ಅವರು, ಅಯೋಧ್ಯೆಯಲ್ಲಿ ದೇವಾಲಯದ ಸ್ಥಳದಲ್ಲಿ ನಿರ್ಮಾಣ ಕಾರ್ಯಗಳನ್ನು ಉದ್ಘಾಟಿಸುವಂತೆ ಪ್ರಧಾನಿಯವರನ್ನು ಕೋರಿದ್ದೇವೆ ಎಂದು ಹೇಳಿದ್ದರು.</p>.<p>‘ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯಗಳನ್ನು ಉದ್ಘಾಟಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇವೆ. ಪೂಜಾ ಕಾರ್ಯಗಳು ಮೂರು ತಿಂಗಳಿನಿಂದ ನಡೆಯುತ್ತಿವೆ’ ಎಂದು ತಿಳಿಸಿದ್ದರು.</p>.<p>ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದ್ದ ಸುಪ್ರೀಂ, ಮೂರು ತಿಂಗಳೊಳಗೆ ಟ್ರಸ್ಟ್ ರಚಿಸಿ ಮಂದಿರದ ನಿವೇಶನವನ್ನು ಅದಕ್ಕೆ ಒಪ್ಪಿಸಬೇಕು ಎಂದುನವೆಂಬರ್ 9 ರಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>