<p><strong>ಚೆನ್ನೈ/ ಕೋಲ್ಕತ್ತ</strong>: ಕೇಂದ್ರ ಸರ್ಕಾರವು ಅನುಮೋದನೆ ನೀಡಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ವಿರುದ್ಧ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಕಿಡಿ ಕಾರಿದ್ದಾರೆ.</p>.<p>‘ಎನ್ಇಪಿ ಮೂಲಕ ಕೇಂದ್ರ ಸರ್ಕಾರವು ಹಿಂದಿ ಮತ್ತು ಸಂಸ್ಕೃತ ಭಾಷೆಗಳನ್ನು ಹೇರುವ ಕೆಲಸ ಮಾಡುತ್ತಿದೆ. ಈ ನೀತಿಯನ್ನು ಖಂಡಿಸಿ, ಸಮಾನ ಮನಸ್ಕ ಪಕ್ಷಗಳು ಹಾಗೂ ಮುಖ್ಯಮಂತ್ರಿಗಳೆಲ್ಲಾ ಸೇರಿ ಹೋರಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಜಾರಿಯಲ್ಲಿದ್ದ 10+2 ಶಿಕ್ಷಣ ಪದ್ಧತಿ ಯಶಸ್ವಿಯಾಗಿತ್ತು. ಅದರ ಬದಲು 5+3+3+4 ಶಿಕ್ಷಣ ಪದ್ಧತಿಗೆ ಒಪ್ಪಿಗೆ ನೀಡುವ ಮೂಲಕ ಮಕ್ಕಳ ಮನಸ್ಸಿನ ಮೇಲೆ ದಾಳಿ ನಡೆಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ತೀರ್ಮಾನಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ’ ಎಂದು ಅವರು ಪಕ್ಷದ ಸದಸ್ಯರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.</p>.<p><strong>ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ:</strong> ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರು ಸಹ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ನೀತಿಯನ್ನು ರೂಪಿಸುವಾಗ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದು ಪಾಶ್ಚಿಮಾತ್ಯ ಮಾದರಿಯ ನಕಲು ಎಂದು ಹೇಳಿದ್ದಾರೆ.ಈ ನೀತಿಗೆ ಸಂಸತ್ತಿನ ಅನುಮೋದನೆ ಪಡೆದುಕೊಂಡಿಲ್ಲ. ಇದೊಂದು ಏಕಪಕ್ಷೀಯ ನೀತಿಯಾಗಿದೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ/ ಕೋಲ್ಕತ್ತ</strong>: ಕೇಂದ್ರ ಸರ್ಕಾರವು ಅನುಮೋದನೆ ನೀಡಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ವಿರುದ್ಧ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಕಿಡಿ ಕಾರಿದ್ದಾರೆ.</p>.<p>‘ಎನ್ಇಪಿ ಮೂಲಕ ಕೇಂದ್ರ ಸರ್ಕಾರವು ಹಿಂದಿ ಮತ್ತು ಸಂಸ್ಕೃತ ಭಾಷೆಗಳನ್ನು ಹೇರುವ ಕೆಲಸ ಮಾಡುತ್ತಿದೆ. ಈ ನೀತಿಯನ್ನು ಖಂಡಿಸಿ, ಸಮಾನ ಮನಸ್ಕ ಪಕ್ಷಗಳು ಹಾಗೂ ಮುಖ್ಯಮಂತ್ರಿಗಳೆಲ್ಲಾ ಸೇರಿ ಹೋರಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಜಾರಿಯಲ್ಲಿದ್ದ 10+2 ಶಿಕ್ಷಣ ಪದ್ಧತಿ ಯಶಸ್ವಿಯಾಗಿತ್ತು. ಅದರ ಬದಲು 5+3+3+4 ಶಿಕ್ಷಣ ಪದ್ಧತಿಗೆ ಒಪ್ಪಿಗೆ ನೀಡುವ ಮೂಲಕ ಮಕ್ಕಳ ಮನಸ್ಸಿನ ಮೇಲೆ ದಾಳಿ ನಡೆಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ತೀರ್ಮಾನಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ’ ಎಂದು ಅವರು ಪಕ್ಷದ ಸದಸ್ಯರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.</p>.<p><strong>ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ:</strong> ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರು ಸಹ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ನೀತಿಯನ್ನು ರೂಪಿಸುವಾಗ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದು ಪಾಶ್ಚಿಮಾತ್ಯ ಮಾದರಿಯ ನಕಲು ಎಂದು ಹೇಳಿದ್ದಾರೆ.ಈ ನೀತಿಗೆ ಸಂಸತ್ತಿನ ಅನುಮೋದನೆ ಪಡೆದುಕೊಂಡಿಲ್ಲ. ಇದೊಂದು ಏಕಪಕ್ಷೀಯ ನೀತಿಯಾಗಿದೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>