‘ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಜಾರಿಯಲ್ಲಿದ್ದ 10+2 ಶಿಕ್ಷಣ ಪದ್ಧತಿ ಯಶಸ್ವಿಯಾಗಿತ್ತು. ಅದರ ಬದಲು 5+3+3+4 ಶಿಕ್ಷಣ ಪದ್ಧತಿಗೆ ಒಪ್ಪಿಗೆ ನೀಡುವ ಮೂಲಕ ಮಕ್ಕಳ ಮನಸ್ಸಿನ ಮೇಲೆ ದಾಳಿ ನಡೆಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ತೀರ್ಮಾನಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ’ ಎಂದು ಅವರು ಪಕ್ಷದ ಸದಸ್ಯರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.