‘ಈ ಪ್ರಕರಣದಲ್ಲಿ ಠಾಣಾಧಿಕಾರಿಯ ಜೊತೆಗೆ ಇತರೆ ಯಾವುದೇ ಸಿಬ್ಬಂದಿಯ ಕೈವಾಡ ಇರುವುದು ಸಾಬೀತಾದರೆ ಅವರನ್ನು ಕೂಡಲೇ ಕೆಲಸದಿಂದ ವಜಾ ಮಾಡಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.ದುಷ್ಕರ್ಮಿಗಳು ಪರಾರಿಯಾದ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಭೀಕರ ಪ್ರಕರಣಕ್ಕೆ ಕಾರಣರಾದ ಯಾರನ್ನೂ ಬಿಡುವುದಿಲ್ಲ. ಹತ್ಯೆಗೀಡಾದ ಪೊಲೀಸರ ತ್ಯಾಗವನ್ನು ವ್ಯರ್ಥವಾಗುವುದಿಲ್ಲ’ ಎಂದು ಅವರು ಹೇಳಿದ್ದಾರೆ.