<p class="title"><strong>ಲಖನೌ:</strong>ಕಾನ್ಪುರ ಜಿಲ್ಲೆಯ ಎಂಟು ಮಂದಿ ಪೊಲೀಸರ ಹತ್ಯೆ ಪ್ರಕರಣ ಸಂಬಂಧ, ಚೌಬೆಪುರ ಪೊಲೀಸ್ ಠಾಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.</p>.<p class="title">‘ಠಾಣಾಧಿಕಾರಿ ವಿಜಯ್ ತಿವಾರಿ ವಿರುದ್ಧದ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಅಮಾನತು ಮಾಡಲಾಗಿದೆ ಮತ್ತು ಎಲ್ಲಾ ಆರೋಪಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಮಹಾನಿರ್ದೇಶಕ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.</p>.<p class="title">‘ಈ ಪ್ರಕರಣದಲ್ಲಿ ಠಾಣಾಧಿಕಾರಿಯ ಜೊತೆಗೆ ಇತರೆ ಯಾವುದೇ ಸಿಬ್ಬಂದಿಯ ಕೈವಾಡ ಇರುವುದು ಸಾಬೀತಾದರೆ ಅವರನ್ನು ಕೂಡಲೇ ಕೆಲಸದಿಂದ ವಜಾ ಮಾಡಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.ದುಷ್ಕರ್ಮಿಗಳು ಪರಾರಿಯಾದ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಭೀಕರ ಪ್ರಕರಣಕ್ಕೆ ಕಾರಣರಾದ ಯಾರನ್ನೂ ಬಿಡುವುದಿಲ್ಲ. ಹತ್ಯೆಗೀಡಾದ ಪೊಲೀಸರ ತ್ಯಾಗವನ್ನು ವ್ಯರ್ಥವಾಗುವುದಿಲ್ಲ’ ಎಂದು ಅವರು ಹೇಳಿದ್ದಾರೆ. </p>.<p class="title">ಈ ಪ್ರಕರಣದಲ್ಲಿ ಠಾಣಾಧಿಕಾರಿಯ ಪಾತ್ರವೇನು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ಐಜಿ ನಿರಾಕರಿಸಿದ್ದಾರೆ.</p>.<p class="title">ಕುಖ್ಯಾತ ರೌಡಿ ವಿಕಾಸ್ ದುಬೆ ಎಂಬಾತನನ್ನು ಬಂಧಿಸಲು ಹೋದ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಎಂಟು ಮಂದಿ ಪೊಲೀಸರು ಗುಂಡಿನ ದಾಳಿಯಲ್ಲಿ ಶುಕ್ರವಾರ ಹತ್ಯೆಯಾಗಿದ್ದಾರೆ. ಮೃತಪಟ್ಟವರಲ್ಲಿ ಒಬ್ಬ ಡಿವೈಎಸ್ಪಿ, ಮೂವರು ಸಬ್ಇನ್ಸ್ಪೆಕ್ಟರ್ಗಳೂ ಸೇರಿದ್ದಾರೆ.</p>.<p class="title"><strong>ವಿಕಾಸ್ ದುಬೆ ಮನೆ ಧ್ವಂಸ</strong></p>.<p>ಕಾನ್ಪುರ ಜಿಲ್ಲಾಡಳಿತ ರೌಡಿ ವಿಕಾಸ್ ದುಬೆಗೆ ಸೇರಿದ ಮನೆಯನ್ನು ಬುಲ್ಡೋಜರ್ನಿಂದ ಶನಿವಾರ ಧ್ವಂಸಗೊಳಿಸಿದೆ.</p>.<p>ಈ ವೇಳೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಇದ್ದರು. ಮನೆಯನ್ನು ಕೆಡವುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದುಬೆಯ ವಿರುದ್ಧ ಈವರೆಗೆ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮೂವತ್ತಾರು ಗಂಟೆಗಳಿಂದ ಆತ ನಾಪತ್ತೆಯಾಗಿದ್ದಾನೆ.</p>.<p>‘ನಮ್ಮ ಕುಟುಂಬಕ್ಕೆ ಮಗನಿಂದ ಕಿರಿಕಿರಿ ಉಂಟಾಗಿದೆ. ಆತ ಶರಣಾಗದಿದ್ದರೆ ಅವನನ್ನು ಪೊಲೀಸರು ಕೊಲ್ಲಬೇಕು. ನಾನು 4 ತಿಂಗಳಿನಿಂದ ಮಗನನ್ನು ಭೇಟಿ ಮಾಡಿಲ್ಲ. ಕಿರಿಯ ಮಗನೊಂದಿಗೆ ವಾಸಿಸುತ್ತಿದ್ದೇನೆ. ಅವನಿಂದ ನಮಗೆ ತೊಂದರೆಯಾಗಿದ್ದು, ಮುಜುಗರ ಎದುರಿಸುತ್ತಿದ್ದೇವೆ’ ಎಂದುತಾಯಿ ಸರ್ಲಾ ದೇವಿ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong>ಕಾನ್ಪುರ ಜಿಲ್ಲೆಯ ಎಂಟು ಮಂದಿ ಪೊಲೀಸರ ಹತ್ಯೆ ಪ್ರಕರಣ ಸಂಬಂಧ, ಚೌಬೆಪುರ ಪೊಲೀಸ್ ಠಾಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.</p>.<p class="title">‘ಠಾಣಾಧಿಕಾರಿ ವಿಜಯ್ ತಿವಾರಿ ವಿರುದ್ಧದ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಅಮಾನತು ಮಾಡಲಾಗಿದೆ ಮತ್ತು ಎಲ್ಲಾ ಆರೋಪಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಮಹಾನಿರ್ದೇಶಕ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.</p>.<p class="title">‘ಈ ಪ್ರಕರಣದಲ್ಲಿ ಠಾಣಾಧಿಕಾರಿಯ ಜೊತೆಗೆ ಇತರೆ ಯಾವುದೇ ಸಿಬ್ಬಂದಿಯ ಕೈವಾಡ ಇರುವುದು ಸಾಬೀತಾದರೆ ಅವರನ್ನು ಕೂಡಲೇ ಕೆಲಸದಿಂದ ವಜಾ ಮಾಡಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.ದುಷ್ಕರ್ಮಿಗಳು ಪರಾರಿಯಾದ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಭೀಕರ ಪ್ರಕರಣಕ್ಕೆ ಕಾರಣರಾದ ಯಾರನ್ನೂ ಬಿಡುವುದಿಲ್ಲ. ಹತ್ಯೆಗೀಡಾದ ಪೊಲೀಸರ ತ್ಯಾಗವನ್ನು ವ್ಯರ್ಥವಾಗುವುದಿಲ್ಲ’ ಎಂದು ಅವರು ಹೇಳಿದ್ದಾರೆ. </p>.<p class="title">ಈ ಪ್ರಕರಣದಲ್ಲಿ ಠಾಣಾಧಿಕಾರಿಯ ಪಾತ್ರವೇನು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ಐಜಿ ನಿರಾಕರಿಸಿದ್ದಾರೆ.</p>.<p class="title">ಕುಖ್ಯಾತ ರೌಡಿ ವಿಕಾಸ್ ದುಬೆ ಎಂಬಾತನನ್ನು ಬಂಧಿಸಲು ಹೋದ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಎಂಟು ಮಂದಿ ಪೊಲೀಸರು ಗುಂಡಿನ ದಾಳಿಯಲ್ಲಿ ಶುಕ್ರವಾರ ಹತ್ಯೆಯಾಗಿದ್ದಾರೆ. ಮೃತಪಟ್ಟವರಲ್ಲಿ ಒಬ್ಬ ಡಿವೈಎಸ್ಪಿ, ಮೂವರು ಸಬ್ಇನ್ಸ್ಪೆಕ್ಟರ್ಗಳೂ ಸೇರಿದ್ದಾರೆ.</p>.<p class="title"><strong>ವಿಕಾಸ್ ದುಬೆ ಮನೆ ಧ್ವಂಸ</strong></p>.<p>ಕಾನ್ಪುರ ಜಿಲ್ಲಾಡಳಿತ ರೌಡಿ ವಿಕಾಸ್ ದುಬೆಗೆ ಸೇರಿದ ಮನೆಯನ್ನು ಬುಲ್ಡೋಜರ್ನಿಂದ ಶನಿವಾರ ಧ್ವಂಸಗೊಳಿಸಿದೆ.</p>.<p>ಈ ವೇಳೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಇದ್ದರು. ಮನೆಯನ್ನು ಕೆಡವುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದುಬೆಯ ವಿರುದ್ಧ ಈವರೆಗೆ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮೂವತ್ತಾರು ಗಂಟೆಗಳಿಂದ ಆತ ನಾಪತ್ತೆಯಾಗಿದ್ದಾನೆ.</p>.<p>‘ನಮ್ಮ ಕುಟುಂಬಕ್ಕೆ ಮಗನಿಂದ ಕಿರಿಕಿರಿ ಉಂಟಾಗಿದೆ. ಆತ ಶರಣಾಗದಿದ್ದರೆ ಅವನನ್ನು ಪೊಲೀಸರು ಕೊಲ್ಲಬೇಕು. ನಾನು 4 ತಿಂಗಳಿನಿಂದ ಮಗನನ್ನು ಭೇಟಿ ಮಾಡಿಲ್ಲ. ಕಿರಿಯ ಮಗನೊಂದಿಗೆ ವಾಸಿಸುತ್ತಿದ್ದೇನೆ. ಅವನಿಂದ ನಮಗೆ ತೊಂದರೆಯಾಗಿದ್ದು, ಮುಜುಗರ ಎದುರಿಸುತ್ತಿದ್ದೇವೆ’ ಎಂದುತಾಯಿ ಸರ್ಲಾ ದೇವಿ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>