<p class="title"><strong>ನವದೆಹಲಿ</strong>: ‘ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಸೋಮವಾರ ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಯೂರಿಯಾದ ಅವಶ್ಯಕತೆ ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಗೆ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಹೇಳಿದರು. </p>.<p>‘ಲಾಕ್ಡೌನ್ ಅವಧಿಯಲ್ಲಿ ರಸಗೊಬ್ಬರ ಮಾರಾಟ ಶೇ 83 ರಷ್ಟು ಹೆಚ್ಚಾಗಿದೆ. ಇದು ಕೃಷಿ ಕ್ಷೇತ್ರದಲ್ಲಿ ದಾಖಲೆಯ ಬೆಳವಣಿಗೆಯಾಗಿದೆ.2020ರ ಏಪ್ರಿಲ್- ಜೂನ್ ತಿಂಗಳ ನಡುವಿನ ಅವಧಿಯಲ್ಲಿ ಒಟ್ಟು 111.61 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 61.05 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ರಸಗೊಬ್ಬರ ಮಾರಾಟವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಲಾಕ್ಡೌನ್ ಅವಧಿಯಲ್ಲಿ ಪ್ರಯಾಣಿಕ ರೈಲು ಸಂಚಾರ ಇರದ ಸಮಯದಲ್ಲಿಯೂ ರೈಲ್ವೆ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುವ ಮೂಲಕ ರಾಜ್ಯಗಳಿಗೆ ರಸಗೊಬ್ಬರವನ್ನು ಪೂರೈಸಲಾಗಿತ್ತು.ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ದೇಶದಾದ್ಯಂತ ರಸಗೊಬ್ಬರ ಘಟಕಗಳ ಕಾರ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗಿತ್ತು’ ಎಂದರು.</p>.<p>‘ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಲಭ್ಯತೆ ಮತ್ತು ದಾಸ್ತಾನಿನ ಬಗ್ಗೆ ಸತತ ನಿಗಾ ವಹಿಸಲಾಗಿದೆ. ಬಿತ್ತನೆಗೆ ಮೊದಲು ರೈತರಿಗೆ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಬದ್ಧವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ‘ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಸೋಮವಾರ ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಯೂರಿಯಾದ ಅವಶ್ಯಕತೆ ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಗೆ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಹೇಳಿದರು. </p>.<p>‘ಲಾಕ್ಡೌನ್ ಅವಧಿಯಲ್ಲಿ ರಸಗೊಬ್ಬರ ಮಾರಾಟ ಶೇ 83 ರಷ್ಟು ಹೆಚ್ಚಾಗಿದೆ. ಇದು ಕೃಷಿ ಕ್ಷೇತ್ರದಲ್ಲಿ ದಾಖಲೆಯ ಬೆಳವಣಿಗೆಯಾಗಿದೆ.2020ರ ಏಪ್ರಿಲ್- ಜೂನ್ ತಿಂಗಳ ನಡುವಿನ ಅವಧಿಯಲ್ಲಿ ಒಟ್ಟು 111.61 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 61.05 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ರಸಗೊಬ್ಬರ ಮಾರಾಟವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಲಾಕ್ಡೌನ್ ಅವಧಿಯಲ್ಲಿ ಪ್ರಯಾಣಿಕ ರೈಲು ಸಂಚಾರ ಇರದ ಸಮಯದಲ್ಲಿಯೂ ರೈಲ್ವೆ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುವ ಮೂಲಕ ರಾಜ್ಯಗಳಿಗೆ ರಸಗೊಬ್ಬರವನ್ನು ಪೂರೈಸಲಾಗಿತ್ತು.ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ದೇಶದಾದ್ಯಂತ ರಸಗೊಬ್ಬರ ಘಟಕಗಳ ಕಾರ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗಿತ್ತು’ ಎಂದರು.</p>.<p>‘ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಲಭ್ಯತೆ ಮತ್ತು ದಾಸ್ತಾನಿನ ಬಗ್ಗೆ ಸತತ ನಿಗಾ ವಹಿಸಲಾಗಿದೆ. ಬಿತ್ತನೆಗೆ ಮೊದಲು ರೈತರಿಗೆ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಬದ್ಧವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>