<p><strong>ನವದೆಹಲಿ</strong>: ಲಾಕ್ಡೌನ್ ಅವಧಿಯಲ್ಲಿ ಸ್ವಗ್ರಾಮಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ಯಾವ ರೀತಿಯ ಉದ್ಯೋಗ ನೀಡಲಾಗಿದೆ ಎಂಬ ಬಗ್ಗೆ ಮೂರು ವಾರಗಳ ಒಳಗಾಗಿ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಾಕೀತು ಮಾಡಿದೆ.</p>.<p>ಕೋವಿಡ್–19 ತಡೆಗಾಗಿ ಹೇರಿದ್ದ ಲಾಕ್ಡೌನ್ನಿಂದಾಗಿ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರು ಮುಂಬೈ, ದೆಹಲಿ ಮತ್ತು ಇತರ ಮಹಾನಗರಗಳನ್ನು ತೊರೆದು ಏಪ್ರಿಲ್–ಮೇ ತಿಂಗಳಲ್ಲಿ ಸ್ವಗ್ರಾಮಗಳಿಗೆ ಮರಳಿದ್ದರು.</p>.<p>ಇಂಥ ವಲಸೆ ಕಾರ್ಮಿಕರ ನೋಂದಣಿ ಮಾಡಿಕೊಳ್ಳಲು ಮತ್ತು ಅವರ ಕೌಶಲವನ್ನು ಸ್ಥಳೀಯವಾಗಿ ಬಳಸಿಕೊಳ್ಳುವ ಬಗ್ಗೆ ಏನಾದರೂ ನಿರ್ದಿಷ್ಟ ಯೋಜನೆ ರೂಪಿಸಲಾಗಿದೆಯೇ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠ ಪ್ರಶ್ನಿಸಿದೆ.</p>.<p>ವಲಸೆ ಕಾರ್ಮಿಕರ ಬಗ್ಗೆ ಸಮಗ್ರ ಮಾಹಿತಿ ಸಲ್ಲಿಸುವಂತೆ ಜೂನ್ 9ರಂದು ನಿರ್ದೇಶನ ನೀಡಲಾಗಿತ್ತು. ಆದರೆ,ಈ ಬಗ್ಗೆ ಇದುವರೆಗೂ ಯಾವೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>ವಲಸೆ ಕಾರ್ಮಿಕರ ಸಂಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿತ್ತು.</p>.<p>ಗ್ರಾಮಗಳಿಗೆ ಹಿಂದಿರುಗಿದ ಕಾರ್ಮಿಕರ ಕೌಶಲ ಮತ್ತು ಅನುಭವಕ್ಕೆ ಅನುಸಾರವಾಗಿ ಯಾವ ಉದ್ಯೋಗ ನೀಡಲಾಗಿದೆ ಎಂಬ ಮಾಹಿತಿಯನ್ನು ದಾಖಲೆ ಸಮೇತ ಸಲ್ಲಿಸುವಂತೆ ಸೂಚಿಸಿದೆ.</p>.<p>ಮಹಾರಾಷ್ಟ್ರ ಮತ್ತು ಬಿಹಾರ ಸರ್ಕಾರಗಳುಇದೇ ವೇಳೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿ ಕಾರ್ಮಿಕರಿಗೆ ಒದಗಿಸಿದ ಉದ್ಯೋಗ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿದವು.</p>.<p>ಕಾರ್ಮಿಕರ ಆಹಾರ ಭದ್ರತೆ, ಆರೋಗ್ಯ ವಿಮೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಬಗ್ಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗಮನ ಸೆಳೆದರು. ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಿದ ನಂತರವಷ್ಟೇ (ನಾಲ್ಕು ವಾರದ ನಂತರ)ಈ ಎಲ್ಲ ಸಮಸ್ಯೆಗಳನ್ನು ಆಲಿಸುವುದಾಗಿ ಪೀಠವು ಸಿಂಘ್ವಿ ಅವರಿಗೆ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲಾಕ್ಡೌನ್ ಅವಧಿಯಲ್ಲಿ ಸ್ವಗ್ರಾಮಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ಯಾವ ರೀತಿಯ ಉದ್ಯೋಗ ನೀಡಲಾಗಿದೆ ಎಂಬ ಬಗ್ಗೆ ಮೂರು ವಾರಗಳ ಒಳಗಾಗಿ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಾಕೀತು ಮಾಡಿದೆ.</p>.<p>ಕೋವಿಡ್–19 ತಡೆಗಾಗಿ ಹೇರಿದ್ದ ಲಾಕ್ಡೌನ್ನಿಂದಾಗಿ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರು ಮುಂಬೈ, ದೆಹಲಿ ಮತ್ತು ಇತರ ಮಹಾನಗರಗಳನ್ನು ತೊರೆದು ಏಪ್ರಿಲ್–ಮೇ ತಿಂಗಳಲ್ಲಿ ಸ್ವಗ್ರಾಮಗಳಿಗೆ ಮರಳಿದ್ದರು.</p>.<p>ಇಂಥ ವಲಸೆ ಕಾರ್ಮಿಕರ ನೋಂದಣಿ ಮಾಡಿಕೊಳ್ಳಲು ಮತ್ತು ಅವರ ಕೌಶಲವನ್ನು ಸ್ಥಳೀಯವಾಗಿ ಬಳಸಿಕೊಳ್ಳುವ ಬಗ್ಗೆ ಏನಾದರೂ ನಿರ್ದಿಷ್ಟ ಯೋಜನೆ ರೂಪಿಸಲಾಗಿದೆಯೇ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠ ಪ್ರಶ್ನಿಸಿದೆ.</p>.<p>ವಲಸೆ ಕಾರ್ಮಿಕರ ಬಗ್ಗೆ ಸಮಗ್ರ ಮಾಹಿತಿ ಸಲ್ಲಿಸುವಂತೆ ಜೂನ್ 9ರಂದು ನಿರ್ದೇಶನ ನೀಡಲಾಗಿತ್ತು. ಆದರೆ,ಈ ಬಗ್ಗೆ ಇದುವರೆಗೂ ಯಾವೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>ವಲಸೆ ಕಾರ್ಮಿಕರ ಸಂಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿತ್ತು.</p>.<p>ಗ್ರಾಮಗಳಿಗೆ ಹಿಂದಿರುಗಿದ ಕಾರ್ಮಿಕರ ಕೌಶಲ ಮತ್ತು ಅನುಭವಕ್ಕೆ ಅನುಸಾರವಾಗಿ ಯಾವ ಉದ್ಯೋಗ ನೀಡಲಾಗಿದೆ ಎಂಬ ಮಾಹಿತಿಯನ್ನು ದಾಖಲೆ ಸಮೇತ ಸಲ್ಲಿಸುವಂತೆ ಸೂಚಿಸಿದೆ.</p>.<p>ಮಹಾರಾಷ್ಟ್ರ ಮತ್ತು ಬಿಹಾರ ಸರ್ಕಾರಗಳುಇದೇ ವೇಳೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿ ಕಾರ್ಮಿಕರಿಗೆ ಒದಗಿಸಿದ ಉದ್ಯೋಗ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿದವು.</p>.<p>ಕಾರ್ಮಿಕರ ಆಹಾರ ಭದ್ರತೆ, ಆರೋಗ್ಯ ವಿಮೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಬಗ್ಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗಮನ ಸೆಳೆದರು. ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಿದ ನಂತರವಷ್ಟೇ (ನಾಲ್ಕು ವಾರದ ನಂತರ)ಈ ಎಲ್ಲ ಸಮಸ್ಯೆಗಳನ್ನು ಆಲಿಸುವುದಾಗಿ ಪೀಠವು ಸಿಂಘ್ವಿ ಅವರಿಗೆ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>