ಕಾರ್ಮಿಕರ ಆಹಾರ ಭದ್ರತೆ, ಆರೋಗ್ಯ ವಿಮೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಬಗ್ಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗಮನ ಸೆಳೆದರು. ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಿದ ನಂತರವಷ್ಟೇ (ನಾಲ್ಕು ವಾರದ ನಂತರ)ಈ ಎಲ್ಲ ಸಮಸ್ಯೆಗಳನ್ನು ಆಲಿಸುವುದಾಗಿ ಪೀಠವು ಸಿಂಘ್ವಿ ಅವರಿಗೆ ತಿಳಿಸಿತು.