<p class="title"><strong>ಪಾಟ್ನಾ: </strong>ಸುಶಾಂತ್ ಸಿಂಗ್ ರಜಪೂತ್ಆತ್ಮಹತ್ಯೆ ಪ್ರಕರಣ ಸಂಬಂಧ, ಬಿಹಾರ ಪೊಲೀಸರ ತಂಡ ಈವರೆಗೆ ಆರು ಮಂದಿಯ ಹೇಳಿಕೆ ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p class="title">ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ‘ಆತ್ಮಹತ್ಯೆಗೆ ಪ್ರಚೋದನೆ’ ಪ್ರಕರಣದ ತನಿಖೆಗಾಗಿಬಿಹಾರದ ನಾಲ್ವರು ಪೊಲೀಸರ ತಂಡ ಕಳೆದ ಬುಧವಾರ ಮುಂಬೈಗೆ ಆಗಮಿಸಿದೆ.</p>.<p class="title">ಸುಶಾಂತ್ ಸಿಂಗ್ ಸಹೋದರಿ, ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ, ಅಡುಗೆಯವರು, ಸ್ನೇಹಿತರು ಮತ್ತು ಸಹೋದ್ಯೋಗಿಗಳ ವಿಚಾರಣೆಯನ್ನು ನಡೆಸಲಾಗಿದೆ.ಪೊಲೀಸ್ ತಂಡವು ಸುಶಾಂತ್ ಅವರ ಜತೆಗಿದ್ದ ಸಿಬ್ಬಂದಿಯನ್ನು ಪ್ರಶ್ನಿಸುವ ಸಾಧ್ಯತೆಯಿದೆ.</p>.<p class="title">ಸುಶಾಂತ್ ಅವರ ವಿವಿಧ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರ ಹಣಕಾಸಿನ ವಹಿವಾಟುಗಳನ್ನು ಪರಿಶೀಲಿಸಲು ಪೊಲೀಸರು ಬ್ಯಾಂಕ್ಗಳಿಗೆ ಭೇಟಿ ನೀಡಿದ್ದರು.</p>.<p class="title">ಈ ಪ್ರಕರಣದಲ್ಲಿ ಮುಂಬೈ ಅಪರಾಧ ವಿಭಾಗದ ನೆರವನ್ನು ಬಿಹಾರ ಪೊಲೀಸರು ಕೋರಿದ್ದಾರೆ.</p>.<p class="title">ಸುಶಾಂತ್ ತಂದೆ ಕೃಷ್ಣ ಕಿಶೋರ್ ಸಿಂಗ್ ಅವರು ‘ತನ್ನ ಮಗನನ್ನು ಆತ್ಮಹತ್ಯೆಗೆ ಪ್ರಚೋದಿಸಲಾಗಿದೆ’ ಎಂದು ಆರೋಪಿಸಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಪಟ್ನಾದಲ್ಲಿ ಕಳೆದ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<p class="title"><strong>‘ಸಿಬಿಐ ತನಿಖೆಗೆ ಒತ್ತಾಯಿಸಿದರೆ ಸಿ.ಎಂಸ್ಪಂದಿಸಲಿದ್ದಾರೆ’</strong></p>.<p>‘ಸುಶಾಂತ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅವರ ಕುಟುಂಬದವರು ಒತ್ತಾಯಿಸಿದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಖಂಡಿತವಾಗಿಯೂ ಸ್ಪಂದಿಸಲಿದ್ದಾರೆ’ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ಝಾ ತಿಳಿಸಿದ್ದಾರೆ.</p>.<p>‘ಸುಶಾಂತ್ ಕುಟುಂಬಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>‘ಸುಶಾಂತ್ ತಂದೆ ಪಟ್ನಾದಲ್ಲಿ ದೂರು ನೀಡಿದ ನಂತರ ನ್ಯಾಯಯುತ ತನಿಖೆ ಪ್ರಾರಂಭವಾಗಿದೆ. ಮುಂಬೈ ಪೊಲೀಸರು ತನಿಖೆಗೆ ಸೂಕ್ತ ನೆರವು ನೀಡುತ್ತಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ತನಿಖೆ ನಡೆಸುವ ನೆಪದಲ್ಲಿ ಮುಂಬೈ ಪೊಲೀಸರು ಫೋಟೊಗೆ ಪೋಸು ನೀಡುತ್ತಾ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆಯೇ ಹೊರತು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಬಿಹಾರ ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸುತ್ತಿದ್ದರೂ, ಅವರ ತನಿಖೆಗೆ ಅಡ್ಡಿ ಉಂಟುಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಾಟ್ನಾ: </strong>ಸುಶಾಂತ್ ಸಿಂಗ್ ರಜಪೂತ್ಆತ್ಮಹತ್ಯೆ ಪ್ರಕರಣ ಸಂಬಂಧ, ಬಿಹಾರ ಪೊಲೀಸರ ತಂಡ ಈವರೆಗೆ ಆರು ಮಂದಿಯ ಹೇಳಿಕೆ ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p class="title">ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ‘ಆತ್ಮಹತ್ಯೆಗೆ ಪ್ರಚೋದನೆ’ ಪ್ರಕರಣದ ತನಿಖೆಗಾಗಿಬಿಹಾರದ ನಾಲ್ವರು ಪೊಲೀಸರ ತಂಡ ಕಳೆದ ಬುಧವಾರ ಮುಂಬೈಗೆ ಆಗಮಿಸಿದೆ.</p>.<p class="title">ಸುಶಾಂತ್ ಸಿಂಗ್ ಸಹೋದರಿ, ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ, ಅಡುಗೆಯವರು, ಸ್ನೇಹಿತರು ಮತ್ತು ಸಹೋದ್ಯೋಗಿಗಳ ವಿಚಾರಣೆಯನ್ನು ನಡೆಸಲಾಗಿದೆ.ಪೊಲೀಸ್ ತಂಡವು ಸುಶಾಂತ್ ಅವರ ಜತೆಗಿದ್ದ ಸಿಬ್ಬಂದಿಯನ್ನು ಪ್ರಶ್ನಿಸುವ ಸಾಧ್ಯತೆಯಿದೆ.</p>.<p class="title">ಸುಶಾಂತ್ ಅವರ ವಿವಿಧ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರ ಹಣಕಾಸಿನ ವಹಿವಾಟುಗಳನ್ನು ಪರಿಶೀಲಿಸಲು ಪೊಲೀಸರು ಬ್ಯಾಂಕ್ಗಳಿಗೆ ಭೇಟಿ ನೀಡಿದ್ದರು.</p>.<p class="title">ಈ ಪ್ರಕರಣದಲ್ಲಿ ಮುಂಬೈ ಅಪರಾಧ ವಿಭಾಗದ ನೆರವನ್ನು ಬಿಹಾರ ಪೊಲೀಸರು ಕೋರಿದ್ದಾರೆ.</p>.<p class="title">ಸುಶಾಂತ್ ತಂದೆ ಕೃಷ್ಣ ಕಿಶೋರ್ ಸಿಂಗ್ ಅವರು ‘ತನ್ನ ಮಗನನ್ನು ಆತ್ಮಹತ್ಯೆಗೆ ಪ್ರಚೋದಿಸಲಾಗಿದೆ’ ಎಂದು ಆರೋಪಿಸಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಪಟ್ನಾದಲ್ಲಿ ಕಳೆದ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<p class="title"><strong>‘ಸಿಬಿಐ ತನಿಖೆಗೆ ಒತ್ತಾಯಿಸಿದರೆ ಸಿ.ಎಂಸ್ಪಂದಿಸಲಿದ್ದಾರೆ’</strong></p>.<p>‘ಸುಶಾಂತ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅವರ ಕುಟುಂಬದವರು ಒತ್ತಾಯಿಸಿದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಖಂಡಿತವಾಗಿಯೂ ಸ್ಪಂದಿಸಲಿದ್ದಾರೆ’ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ಝಾ ತಿಳಿಸಿದ್ದಾರೆ.</p>.<p>‘ಸುಶಾಂತ್ ಕುಟುಂಬಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>‘ಸುಶಾಂತ್ ತಂದೆ ಪಟ್ನಾದಲ್ಲಿ ದೂರು ನೀಡಿದ ನಂತರ ನ್ಯಾಯಯುತ ತನಿಖೆ ಪ್ರಾರಂಭವಾಗಿದೆ. ಮುಂಬೈ ಪೊಲೀಸರು ತನಿಖೆಗೆ ಸೂಕ್ತ ನೆರವು ನೀಡುತ್ತಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ತನಿಖೆ ನಡೆಸುವ ನೆಪದಲ್ಲಿ ಮುಂಬೈ ಪೊಲೀಸರು ಫೋಟೊಗೆ ಪೋಸು ನೀಡುತ್ತಾ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆಯೇ ಹೊರತು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಬಿಹಾರ ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸುತ್ತಿದ್ದರೂ, ಅವರ ತನಿಖೆಗೆ ಅಡ್ಡಿ ಉಂಟುಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>