ಹೈದರಾಬಾದ್: 2020ನೇ ಸಾಲಿನಲ್ಲಿ ಅನುತ್ತೀರ್ಣಗೊಂಡಿರುವ 12ನೇ ತರಗತಿಯ ವಿದ್ಯಾರ್ಥಿಗಳ ಪೂರಕ ಪರೀಕ್ಷೆಯನ್ನು ರದ್ದುಗೊಳಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ 12ನೇ ತರಗತಿಯ ಪೂರಕ ಪರೀಕ್ಷೆಗೆ ಹಾಜರಾಗಬೇಕಿದ್ದ 1.47 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದಾಗಿ ಘೋಷಿಸಲಾಗಿದ್ದು, ಜುಲೈ 31ರ ಒಳಗೆ ಅಂಕ ಪತ್ರಗಳನ್ನು ಮೆಮೊ ಮೂಲಕ ನೀಡಲಾಗುವುದು ಎಂದು ತೆಲಂಗಾಣ ಸರ್ಕಾರ ತಿಳಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದಿರಾ ರೆಡ್ಡಿ, 'ತೆಲಂಗಾಣ ಸರ್ಕಾರ 12ನೇ ತರಗತಿಯ ಪೂರಕ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಅನುತ್ತೀರ್ಣರಾಗಿರುವ 1,47,000 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದಾಗಿ ಘೋಷಿಸಲಾಗುತ್ತದೆ' ಎಂದು ಸ್ಪಷ್ಟಪಡಿಸಿದ್ದಾರೆ.
Telangana Government has cancelled intermediate supplementary exams. The 1,47,000 students who have failed in the second year, will be declared pass under the 'compartment' category: Sabita Indira Reddy, Telangana Education Minister pic.twitter.com/i665wWNYMn