ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಖಂಡಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ, ಆರೋಪಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಸಂತ್ರಸ್ತೆಯ ಕುಟುಂಬ ಹಾಗೂ ಯಶ್ವೀರ್ ಕುಟುಂಬದ ನಡುವೆ ಮೊದಲಿನಿಂದಲೂ ವೈರತ್ವ ಇತ್ತು. ನಾಲ್ಕು ವರ್ಷಗಳ ಹಿಂದೆ ಯಶ್ವೀರ್ ತಂದೆಯನ್ನು ಸಂತ್ರಸ್ತೆಯ ಕುಟುಂಬದವರು ಹತ್ಯೆ ಮಾಡಿದ್ದರು. ಈ ಆರೋಪದಲ್ಲಿ ಆಕೆಯ ಕುಟುಂಬದ ಇಬ್ಬರು ಕಾರಾಗೃಹವಾಸ ಅನುಭವಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.