ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ಕಸ್ಟಡಿಯಲ್ಲಿ ತಂದೆ–ಮಗ ಸಾವು: ಸಿಬಿಐನಿಂದ ಎರಡು ಎಫ್‌ಐಆರ್‌

Last Updated 8 ಜುಲೈ 2020, 10:21 IST
ಅಕ್ಷರ ಗಾತ್ರ

ನವದೆಹಲಿ: ತೂತ್ತುಕುಡಿಯಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ತಂದೆ–ಮಗ ಸಾವನ್ನಪ್ಪಿದ ಪ್ರಕರಣ ಕುರಿತು ತನಿಖೆಯನ್ನು ಆರಂಭಿಸಿರುವ ಸಿಬಿಐ, ಎರಡು ಎಫ್‌ಐಆರ್‌ ದಾಖಲಿಸಿದೆ.

‘ತನಿಖೆ ನಡೆಸುವ ಸಲುವಾಗಿ ತಂಡವೊಂದನ್ನು ತಮಿಳುನಾಡಿಗೆ ಕಳುಹಿಸಿಕೊಡಲಾಗಿದೆ. ಈಗಾಗಲೇ ನಾಲ್ವರು ಪೊಲೀಸ್‌ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಅವರನ್ನು ಈ ತಂಡವು ವಶಕ್ಕೆ ಪಡೆಯಲಿದೆ’ ಎಂದು ಸಿಬಿಐ ವಕ್ತಾರ ಆರ್‌.ಕೆ.ಗೌರ್‌ ತಿಳಿಸಿದರು.

ಪಿ.ಜಯರಾಜ್‌ ಹಾಗೂ ಮಗ ಬೆನಿಕ್ಸ್‌ ಅವರು ಲಾಕ್‌ಡೌನ್‌ ಅವಧಿ ಮೀರಿಯೂ ತಮ್ಮ ಮೊಬೈಲ್‌ ಅಂಗಡಿ ತೆರೆದಿದ್ದರು ಎಂಬ ಕಾರಣವೊಡ್ಡಿ ಇಬ್ಬರನ್ನು ಪೊಲೀಸರು ಜೂನ್‌ 19ರಂದು ಬಂಧಿಸಿದ್ದರು. ಅವರು ಪೊಲೀಸ್‌ ಕಸ್ಟಡಿಯಲ್ಲಿದ್ದಾಗಲೇ ಜೂನ್‌ 22ರಂದು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT