ಈ ಕುರಿತು ಟ್ವೀಟ್ ಮಾಡಿರುವ ಅವರು, ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ಕೆಲ ನಾಯಕರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುವುದನ್ನು ನಾನು ಕೇಳಿದಾಗಿನಿಂದಲೂ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳುವವರ ಬಗ್ಗೆ ನನಗೆ ಚಿಂತೆಯುಂಟಾಗಿದೆ. ಸಮಾರಂಭದ ದಿನದಂದು ಸರಯು ನದಿಯ ದಡದಲ್ಲಿ ಉಳಿಯುತ್ತೇನೆ ಎಂದು ನಾನು ದೇವಾಲಯದ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದಿದ್ದಾರೆ.