ಪರೀಕ್ಷೆ, ಸೋಂಕಿತರ ಮೂಲ ಪತ್ತೆ, ಚಿಕಿತ್ಸೆಗೆ (ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್) ಹೆಚ್ಚು ಒತ್ತು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಸೋಂಕು ಪತ್ತೆ ಪರೀಕ್ಷೆ ಹೆಚ್ಚಿಸಬೇಕಾದ ಅಗತ್ಯವಿದೆ. ದೆಹಲಿಯಲ್ಲಿ ಖುದ್ದು ನಾನೇ ಪರಿಸ್ಥಿತಿ ನಿಭಾಯಿಸುತ್ತಿದ್ದೇನೆ. ಅಲ್ಲಿ ಚೇತರಿಕೆ ಪ್ರಮಾಣ ಶೇ 84ರಷ್ಟಿದೆ. ಎಲ್ಲ ರಾಜ್ಯಗಳು ದೆಹಲಿ ಮಾದರಿಯನ್ನು ಅನುಸರಿಸಬೇಕಿದೆ ಎಂದು ಅವರು ಹೇಳಿದ್ದಾರೆ.