<p><strong>ಲಖನೌ: </strong>ಎನ್ಕೌಂಟರ್ನಲ್ಲಿ ಸಾವಿಗೀಡಾದ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಕುರಿತು ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉತ್ತರಪ್ರದೇಶಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.</p>.<p>ಕಾರು ಪಲ್ಟಿಯಾದ ಬಳಿಕ ವಿಕಾಸ್ ದುಬೆ ಪೊಲೀಸರಿಂದ ಶಸ್ತ್ರಾಸ್ತ್ರ ಕಸಿದುಕಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹೀಗಾಗಿ ಪೊಲೀಸರು ಗುಂಡು ಹಾರಿಸಿದ್ದರು. ಆಗ ಆತನಿಗೆ ಗಾಯವಾಗಿತ್ತು’ ಎಮದು ತಿಳಿಸಿದ್ದಾರೆ.</p>.<p>ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿರುವುದನ್ನು ಆಸ್ಪತ್ರೆಯವರು ಖಚಿತಪಡಿಸಿದರು. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಿದ್ದೇವೆ’ ಎಂದೂ ಹೇಳಿದ್ದಾರೆ.</p>.<p>ಕಳೆದವಾರ (ಜುಲೈ 3ರಂದು) ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ಪೊಲೀಸರು ಮೃತಪಟ್ಟಿದ್ದರು.ಮೃತಪಟ್ಟವರಲ್ಲಿ ಒಬ್ಬ ಡಿವೈಎಸ್ಪಿ, ಮೂವರು ಸಬ್ಇನ್ಸ್ಪೆಕ್ಟರ್ಗಳೂ ಸೇರಿದ್ದರು. ಇದೇ ವೇಳೆಒಬ್ಬ ನಾಗರಿಕ ಮತ್ತು ಆರು ಪೊಲೀಸರಿಗೆಗಾಯಗಳಾಗಿದ್ದವು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೆಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದರು.</p>.<p>ಗುರುವಾರ ಉಜ್ಜಯಿನಿಯಲ್ಲಿ ಸೆರೆಸಿಕ್ಕಿದ್ದ ದುಬೆಯನ್ನು ಮಧ್ಯಪ್ರದೇಶ ಪೊಲೀಸರು, ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆತನನ್ನು ಕಾನ್ಪುರಕ್ಕೆ ಕರೆದೊಯ್ಯವ ವೇಳೆ ವಾಹನ ಪಲ್ಟಿಯಾಗಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆತ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿತ್ತು.</p>.<p>ವಿಶೇಷ ಕಾರ್ಯಪಡೆ ನಡೆಸಿದಬಂಧನ ಕಾರ್ಯಾಚರಣೆ ವೇಳೆ, ಬುಧವಾರ ಒಬ್ಬ ಹಾಗೂ ಗುರುವಾರ ಇಬ್ಬರು ಸಹಚರರು ಮೃತಪಟ್ಟಿದ್ದರು. ದುಬೆಯ ಪತ್ನಿ ಮತ್ತು ಮಗನನ್ನುಗುರುವಾರ ಸಂಜೆ ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಎನ್ಕೌಂಟರ್ನಲ್ಲಿ ಸಾವಿಗೀಡಾದ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಕುರಿತು ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉತ್ತರಪ್ರದೇಶಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.</p>.<p>ಕಾರು ಪಲ್ಟಿಯಾದ ಬಳಿಕ ವಿಕಾಸ್ ದುಬೆ ಪೊಲೀಸರಿಂದ ಶಸ್ತ್ರಾಸ್ತ್ರ ಕಸಿದುಕಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹೀಗಾಗಿ ಪೊಲೀಸರು ಗುಂಡು ಹಾರಿಸಿದ್ದರು. ಆಗ ಆತನಿಗೆ ಗಾಯವಾಗಿತ್ತು’ ಎಮದು ತಿಳಿಸಿದ್ದಾರೆ.</p>.<p>ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿರುವುದನ್ನು ಆಸ್ಪತ್ರೆಯವರು ಖಚಿತಪಡಿಸಿದರು. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಿದ್ದೇವೆ’ ಎಂದೂ ಹೇಳಿದ್ದಾರೆ.</p>.<p>ಕಳೆದವಾರ (ಜುಲೈ 3ರಂದು) ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ಪೊಲೀಸರು ಮೃತಪಟ್ಟಿದ್ದರು.ಮೃತಪಟ್ಟವರಲ್ಲಿ ಒಬ್ಬ ಡಿವೈಎಸ್ಪಿ, ಮೂವರು ಸಬ್ಇನ್ಸ್ಪೆಕ್ಟರ್ಗಳೂ ಸೇರಿದ್ದರು. ಇದೇ ವೇಳೆಒಬ್ಬ ನಾಗರಿಕ ಮತ್ತು ಆರು ಪೊಲೀಸರಿಗೆಗಾಯಗಳಾಗಿದ್ದವು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೆಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದರು.</p>.<p>ಗುರುವಾರ ಉಜ್ಜಯಿನಿಯಲ್ಲಿ ಸೆರೆಸಿಕ್ಕಿದ್ದ ದುಬೆಯನ್ನು ಮಧ್ಯಪ್ರದೇಶ ಪೊಲೀಸರು, ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆತನನ್ನು ಕಾನ್ಪುರಕ್ಕೆ ಕರೆದೊಯ್ಯವ ವೇಳೆ ವಾಹನ ಪಲ್ಟಿಯಾಗಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆತ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿತ್ತು.</p>.<p>ವಿಶೇಷ ಕಾರ್ಯಪಡೆ ನಡೆಸಿದಬಂಧನ ಕಾರ್ಯಾಚರಣೆ ವೇಳೆ, ಬುಧವಾರ ಒಬ್ಬ ಹಾಗೂ ಗುರುವಾರ ಇಬ್ಬರು ಸಹಚರರು ಮೃತಪಟ್ಟಿದ್ದರು. ದುಬೆಯ ಪತ್ನಿ ಮತ್ತು ಮಗನನ್ನುಗುರುವಾರ ಸಂಜೆ ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>