ಭೋಪಾಲ್: ಎಂಟು ಮಂದಿ ಪೊಲೀಸರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಉಜ್ಜಯನಿ ದೇವಾಲಯವೊಂದರಲ್ಲಿವಿಕಾಸ್ ದುಬೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ನಿನ್ನೆ ಪೊಲೀಸರ ಕಾರ್ಯಾಚರಣೆಯಲ್ಲಿ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು.
ಮಂಗಳವಾರ ರಾತ್ರಿ ಫರೀದಾಬಾದ್ನ ಹೋಟೆಲ್ಗೆ ಬಂದಿದ್ದ ದುಬೆ, ತನಗಾಗಿ ಒಂದು ಕೊಠಡಿ ಬುಕ್ ಮಾಡಲು ಮುಂದಾಗಿದ್ದ. ಹೋಟೆಲ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿತ್ತು ಮತ್ತು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ ಪೊಲೀಸರು ಅಲ್ಲಿಗೆ ತಲುಪುವ ಮೊದಲೇ ಆತ ಪರಾರಿಯಾಗಿದ್ದ’ ಎಂದು ಅಧಿಕಾರಿಗಳು ಹೇಳಿದ್ದರು.
ಇನ್ನೊಂದೆಡೆ, ಉತ್ತರಪ್ರದೇಶ ಎಸ್ಟಿಎಫ್ ಹಾಗೂ ಕ್ರೈಂ ಬ್ರಾಂಚ್ ಪೊಲೀಸರು ಫರೀದಾಬಾದ್ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ವಿಕಾಸ್ ದುಬೆಯ ಸಮೀಪವರ್ತಿಗಳೆನಿಸಿಕೊಂಡಿದ್ದಅಂಕುರ್, ಶ್ರವಣ್ ಹಾಗೂ ಕಾರ್ತಿಕೇಯ ಅಲಿಯಾಸ್ ಪ್ರಭಾತ್ ಎಂಬುವರನ್ನು ಬಂಧಿಸಿದ್ದರು.