ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬೆ ಬಂಧನ– ಸ್ಪಷ್ಟನೆಗೆ ಅಖಿಲೇಶ್‌ ಆಗ್ರಹ

Last Updated 10 ಜುಲೈ 2020, 10:14 IST
ಅಕ್ಷರ ಗಾತ್ರ

ಲಖನೌ: ರೌಡಿ ಶೀಟರ್‌ ವಿಕಾಸ್‌ ದುಬೆಯನ್ನು ಪೊಲೀಸರು ಬಂಧಿಸಿದರೇ ಅಥವಾ ಆತನೇ ಪೊಲೀಸರ ಮುಂದೆ ಶರಣಾದನೇ ಎಂಬುದನ್ನು ಉತ್ತರಪ್ರದೇಶ ಸರ್ಕಾರ ಸ್ಪಷ್ಟ ಪಡಿಸಬೇಕು ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಒತ್ತಾಯಿಸಿದ್ದಾರೆ.

ಆತನ ದೂರವಾಣಿ ಕರೆಗಳ ದಾಖಲೆಗಳನ್ನು ಬಹಿರಂಗಪಡಿಸಬೇಕು. ಆಗ ಆತನ ಸಂಪರ್ಕದಲ್ಲಿದ್ದವರ ಬಗ್ಗೆ ತಿಳಿದು ಬರಲಿದೆ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಎಂಟು ಪೊಲೀಸರನ್ನು ಹತ್ಯೆಗೈದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ವಿಕಾಸ್‌ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಕೂಡ ದುಬೆ ಬಂಧನವನ್ನು ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT