ಲಖನೌ: ರೌಡಿ ಶೀಟರ್ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದರೇ ಅಥವಾ ಆತನೇ ಪೊಲೀಸರ ಮುಂದೆ ಶರಣಾದನೇ ಎಂಬುದನ್ನು ಉತ್ತರಪ್ರದೇಶ ಸರ್ಕಾರ ಸ್ಪಷ್ಟ ಪಡಿಸಬೇಕು ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.
ಆತನ ದೂರವಾಣಿ ಕರೆಗಳ ದಾಖಲೆಗಳನ್ನು ಬಹಿರಂಗಪಡಿಸಬೇಕು. ಆಗ ಆತನ ಸಂಪರ್ಕದಲ್ಲಿದ್ದವರ ಬಗ್ಗೆ ತಿಳಿದು ಬರಲಿದೆ ಎಂದು ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.
ಎಂಟು ಪೊಲೀಸರನ್ನು ಹತ್ಯೆಗೈದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರ ಅವರು ಕೂಡ ದುಬೆ ಬಂಧನವನ್ನು ಖಚಿತಪಡಿಸಿದ್ದಾರೆ.