ಆರೋಗ್ಯ ಸ್ಥಿತಿ ಕುರಿತ ಮಾಹಿತಿ ನಿರಾಕರಿಸುವುದು ಎನ್ಎಚ್ಆರ್ಸಿಯ ಜುಲೈ 13ರ ಆದೇಶದ ಉಲ್ಲಂಘನೆ. ರಾವ್ ಅವರಿಗೆ ಅಗತ್ಯ ಚಿಕಿತ್ಸೆ ನೀಡಬೇಕು, ಸಂಬಂಧಿಸಿದ ಮಾಹಿತಿಗಳನ್ನು ಕುಟುಂಬ ಸದಸ್ಯರಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಕುಟುಂಬ ಸದಸ್ಯರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.