ಆರೋಪಿ ಕಾನ್ಪುರ ನಗರದ ಸಮೀಪ ಕಲ್ಯಾಣಪುರ ಪ್ರದೇಶದಲ್ಲಿ ಅಡಗಿರುವ ಮಾಹಿತಿ ತಿಳಿದ ಕೂಡಲೆ ಪೊಲೀಸರು ಅಡಗುದಾಣದ ಮೇಲೆ ದಾಳಿ ನಡೆಸಿದರು. ಕೂಡಲೆ ಆರೋಪಿ ಪ್ರತಿದಾಳಿ ನಡೆಸಲು ಮುಂದಾಗಿದ್ದ. ಪೂರ್ವತಯಾರಿ ಮಾಡಿಕೊಂಡಿದ್ದ ಪೊಲೀಸರು ಆತನ ಕಾಲಿಗೆ ಗುಂಡುಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಹೋತ್ರಿ ಬಳಿ ಪೊಲೀಸರು ಬಂದೂಕು, ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.