ನವದೆಹಲಿ:ರೌಡಿಶೀಟರ್ ವಿಕಾಸ್ ದುಬೆ ಎನ್ಕೌಂಟರ್ ಬಗ್ಗೆ ತನಿಖೆ ನಡೆಸಲು ರಚಿಸಲಾಗಿರುವ ವಿಚಾರಣಾ ಆಯೋಗದಿಂದ ನಿವೃತ್ತ ನ್ಯಾಯಮೂರ್ತಿ ಶಶಿಕಾಂತ್ ಅಗರವಾಲ್ ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸರ ಮಹಾ ನಿರ್ದೇಶಕ ಕೆ.ಎಲ್ ಗುಪ್ತಾ ಅವರನ್ನು ಕೈಬಿಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.