<p><strong>ಮುಬೈ:</strong> ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆಯನ್ನು ಎನ್ಕೌಂಟರ್ನಲ್ಲಿ ಹತ್ಯೆಮಾಡಿದ ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಶಿವಸೇನಾ ಪಕ್ಷವು ಸಮರ್ಥಿಸಿದೆ.</p>.<p>ಕಾನ್ಪುರದಲ್ಲಿ ಎಂಟು ಪೊಲೀಸರನ್ನು ಕೊಂದು ಪರಾರಿಯಾಗಿದ್ದ ವಿಕಾಸ್ ದುಬೆಯನ್ನು ಶುಕ್ರವಾರ ಎನ್ಕೌಂಟರ್ ಮೂಲಕ ಹತ್ಯೆಮಾಡಲಾಗಿತ್ತು. ಈ ವಿಚಾರವು ದೇಶದಾದ್ಯಂತ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದ ಸಂದರ್ಭದಲ್ಲಿ ಶಿವಸೇನಾ ಪಕ್ಷವು ಉತ್ತರ ಪ್ರದೇಶ ಪೊಲೀಸರ ನಡೆಗೆ ಬೆಂಬಲ ವ್ಯಕ್ತಪಡಿಸಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ ನಾಯಕ ಸಂಜಯ್ ರಾವತ್, 'ಸಮವಸ್ತ್ರದಲ್ಲಿ ಇರುವವರ ಮೇಲೆ ಹಲ್ಲೆ ನಡೆಸಿ, ಎಂಟು ಜನರನ್ನು ಕೊಂದ ಸಮಾಜ ವಿರೋಧಿಯೊಬ್ಬನನ್ನು ಕ್ಷಮಿಸಲು ಸಾಧ್ಯವಿಲ್ಲ. ಅವನು ಎನ್ಕೌಂಟರ್ನಲ್ಲಿ ಹತ್ಯೆಯಾದಾಗ ಪೊಲೀಸರನ್ನು ಪ್ರಶ್ನಿಸುವುದು ಮತ್ತು ಅವರನ್ನು ನಿರಾಶೆಗೊಳಿಸುವುದು ಸರಿಯಲ್ಲ' ಎಂದು ತಿಳಿಸಿದ್ದಾರೆ.</p>.<p>'ಎಂಟು ಪೊಲೀಸರನ್ನು ಹಾಗೆ ಕೊಂದರೆ ರಾಜ್ಯ ಸರ್ಕಾರಕ್ಕೆ ಬೇರೆ ದಾರಿ ಇರುವುದಿಲ್ಲ. ಪೊಲೀಸರು ಎನ್ಕೌಂಟರ್ ಮಾಡಿದಾಗ ಮಾಧ್ಯಮ, ರಾಜಕೀಯ ಪಕ್ಷಗಳು ಅಥವಾ ಮಾನವ ಹಕ್ಕುಗಳ ಆಯೋಗ ಯಾರೇ ಆಗಿರಲಿ ಅದನ್ನು ಪ್ರಶ್ನಿಸಬಾರದು. ತನಿಖೆ ನಡೆಸಿ ಆದರೆ ರಾಜಕೀಯಗೊಳಿಸಬೇಡಿ' ಎಂದು ರಾವತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಬೈ:</strong> ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆಯನ್ನು ಎನ್ಕೌಂಟರ್ನಲ್ಲಿ ಹತ್ಯೆಮಾಡಿದ ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಶಿವಸೇನಾ ಪಕ್ಷವು ಸಮರ್ಥಿಸಿದೆ.</p>.<p>ಕಾನ್ಪುರದಲ್ಲಿ ಎಂಟು ಪೊಲೀಸರನ್ನು ಕೊಂದು ಪರಾರಿಯಾಗಿದ್ದ ವಿಕಾಸ್ ದುಬೆಯನ್ನು ಶುಕ್ರವಾರ ಎನ್ಕೌಂಟರ್ ಮೂಲಕ ಹತ್ಯೆಮಾಡಲಾಗಿತ್ತು. ಈ ವಿಚಾರವು ದೇಶದಾದ್ಯಂತ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದ ಸಂದರ್ಭದಲ್ಲಿ ಶಿವಸೇನಾ ಪಕ್ಷವು ಉತ್ತರ ಪ್ರದೇಶ ಪೊಲೀಸರ ನಡೆಗೆ ಬೆಂಬಲ ವ್ಯಕ್ತಪಡಿಸಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ ನಾಯಕ ಸಂಜಯ್ ರಾವತ್, 'ಸಮವಸ್ತ್ರದಲ್ಲಿ ಇರುವವರ ಮೇಲೆ ಹಲ್ಲೆ ನಡೆಸಿ, ಎಂಟು ಜನರನ್ನು ಕೊಂದ ಸಮಾಜ ವಿರೋಧಿಯೊಬ್ಬನನ್ನು ಕ್ಷಮಿಸಲು ಸಾಧ್ಯವಿಲ್ಲ. ಅವನು ಎನ್ಕೌಂಟರ್ನಲ್ಲಿ ಹತ್ಯೆಯಾದಾಗ ಪೊಲೀಸರನ್ನು ಪ್ರಶ್ನಿಸುವುದು ಮತ್ತು ಅವರನ್ನು ನಿರಾಶೆಗೊಳಿಸುವುದು ಸರಿಯಲ್ಲ' ಎಂದು ತಿಳಿಸಿದ್ದಾರೆ.</p>.<p>'ಎಂಟು ಪೊಲೀಸರನ್ನು ಹಾಗೆ ಕೊಂದರೆ ರಾಜ್ಯ ಸರ್ಕಾರಕ್ಕೆ ಬೇರೆ ದಾರಿ ಇರುವುದಿಲ್ಲ. ಪೊಲೀಸರು ಎನ್ಕೌಂಟರ್ ಮಾಡಿದಾಗ ಮಾಧ್ಯಮ, ರಾಜಕೀಯ ಪಕ್ಷಗಳು ಅಥವಾ ಮಾನವ ಹಕ್ಕುಗಳ ಆಯೋಗ ಯಾರೇ ಆಗಿರಲಿ ಅದನ್ನು ಪ್ರಶ್ನಿಸಬಾರದು. ತನಿಖೆ ನಡೆಸಿ ಆದರೆ ರಾಜಕೀಯಗೊಳಿಸಬೇಡಿ' ಎಂದು ರಾವತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>