ಪೊಲೀಸರು ದಾಳಿ ನಡೆಸುವ ಮಾಹಿತಿಯನ್ನು ವಿನಯ್ ತಿವಾರಿ ಮತ್ತು ಕೆ.ಕೆ. ಶರ್ಮಾ ಮೊದಲೇ ದುಬೆಗೆ ತಿಳಿಸಿದ್ದರು ಎನ್ನಲಾಗಿದೆ. ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನೂ ಅಮಾನತು ಮಾಡಲಾಗಿದೆ. ಕಳೆದ ಗುರುವಾರ ಮಧ್ಯರಾತ್ರಿ ಪೊಲೀಸರು ವಿಕಾಸ್ ದುಬೆ ಬಂಧನಕ್ಕೆ ದಾಳಿ ನಡೆಸಿದ್ದರು. ಆ ವೇಳೆ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಪೊಲೀಸರು ಹತರಾಗಿದ್ದರು.