ಇನ್ನೊಂದೆಡೆ, ಉತ್ತರಪ್ರದೇಶ ಎಸ್ಟಿಎಫ್ ಹಾಗೂ ಕ್ರೈಂ ಬ್ರಾಂಚ್ ಪೊಲೀಸರು ಫರೀದಾಬಾದ್ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ವಿಕಾಸ್ ದುಬೆಯ ಸಮೀಪವರ್ತಿಗಳೆನಿಸಿಕೊಂಡ ಅಂಕುರ್, ಶ್ರವಣ್ ಹಾಗೂ ಕಾರ್ತಿಕೇಯ ಅಲಿಯಾಸ್ ಪ್ರಭಾತ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ನಾಲ್ಕು ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ಎರಡು ಪಿಸ್ತೂಲ್ಗಳು ಘಟನೆಯಲ್ಲಿ ಮೃತಪಟ್ಟಿದ್ದ ಪೊಲೀಸರ ಬಳಿ ಇದ್ದವುಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.