‘ಸಿಲಿಗುರಿ ಸಮೀಪದ ಸೋನಾಪುರ ಗ್ರಾಮದಲ್ಲಿ ವಾಸವಿದ್ದ ಬಾಲಕಿ ಭಾನುವಾರ ಬೆಳಿಗ್ಗೆ ಬಹಿರ್ದೆಸೆಗೆಂದು ಮನೆಯಿಂದ ಹೊರಗೆ ಹೋಗಿದ್ದಳು. ಕೆಲವು ಗಂಟೆಗಳ ಬಳಿಕ ಆಕೆಯ ಮೃತದೇಹ ಪತ್ತೆಯಾಗಿತ್ತು.ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಸ್ಥಳಕ್ಕೆ ತೆರಳಿದ್ದ ಪೊಲೀಸರ ಮೇಲೆಯೂ ಆಕ್ರೋಶ ವ್ಯಕ್ತಪಡಿಸಿದ್ದರು. ಕ್ಷಿಪ್ರ ಕ್ರಿಯಾ ಪಡೆಯ ನೆರವಿನಿಂದ ಗಲಭೆಯನ್ನು ನಿಯಂತ್ರಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.