<p><strong>ಜೆನೆವಾ:</strong> ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ (ಸ್ಲಂ) ಒಂದಾದ ಮುಂಬೈನ ಧಾರಾವಿಯಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.</p>.<p>ಆನ್ಲೈನ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧನೋಮ್ ಗೆಬ್ರೇಯೆಸಸ್, ‘ದೊಡ್ಡ ಪ್ರಮಾಣದಲ್ಲಿ ಕೊರೊನಾ ಹರಡಿದ್ದರೂ, ಅದನ್ನು ನಿಯಂತ್ರಣಕ್ಕೆ ತರಬಹುದೆಂಬುದಕ್ಕೆ ಜಗತ್ತಿನಲ್ಲಿ ಹಲವಾರು ನಿದರ್ಶನಗಳಿವೆ. ಇದಕ್ಕೆ ಉತ್ತಮ ಉದಾಹರಣೆ ಇಟಲಿ, ಸ್ಪೇನ್, ದಕ್ಷಿಣ ಕೊರಿಯಾ ಹಾಗೂ ಧಾರಾವಿ ಕೊಳೆಗೇರಿ’ ಎಂದು ಹೇಳಿದ್ದಾರೆ.</p>.<p>‘ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಂಯೋಜಿಸಲ್ಪಟ್ಟ ಆಕ್ರಮಣಕಾರಿ ಕ್ರಮದಿಂದ ಮಾತ್ರ ಮಹಾಮಾರಿ ಕೋವಿಡ್ ಅನ್ನು ನಿಯಂತ್ರಿಸಬಹುದು. ಇದರಲ್ಲಿನಾಯಕತ್ವ, ಸಮುದಾಯ ಭಾಗವಹಿಸುವಿಕೆ ಮತ್ತು ಸಾಮೂಹಿಕ ಒಗ್ಗಟ್ಟಿನ ಪಾತ್ರ ಮಹತ್ವದ್ದು’ ಎಂದು ಹೇಳಿದರು.</p>.<p>ಧಾರಾವಿಯ ವಿಸ್ತೀರ್ಣ 2.5 ಚದರ ಕಿ.ಮೀ. ಇದ್ದು, ಇಲ್ಲಿ 6.50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ.</p>.<p>ಮುಂಬೈನಲ್ಲಿ ಮೊದಲ ಕೋವಿಡ್ ಪ್ರಕರಣ ದಾಖಲಾದ ಮೂರು ವಾರಗಳ ನಂತರ, ಏ.1 ರಂದು ಧಾರಾವಿಯಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾಗಿದೆ.</p>.<p>ಕೋವಿಡ್ ಹಾಟ್ಸ್ಪಾಟ್ ಆಗಿದ್ದ ಧಾರಾವಿಯಲ್ಲಿಜೂನ್ 9ರ ವೇಳೆಗೆ2,347 ಪ್ರಕರಣಗಳು ವರದಿಯಾಗಿದ್ದವು. ಸದ್ಯ ಇಲ್ಲಿ ಕೇವಲ 291 ಸಕ್ರಿಯ ಪ್ರಕರಣಗಳಿದ್ದು, 1,815 ಮಂದಿ ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆನೆವಾ:</strong> ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ (ಸ್ಲಂ) ಒಂದಾದ ಮುಂಬೈನ ಧಾರಾವಿಯಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.</p>.<p>ಆನ್ಲೈನ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧನೋಮ್ ಗೆಬ್ರೇಯೆಸಸ್, ‘ದೊಡ್ಡ ಪ್ರಮಾಣದಲ್ಲಿ ಕೊರೊನಾ ಹರಡಿದ್ದರೂ, ಅದನ್ನು ನಿಯಂತ್ರಣಕ್ಕೆ ತರಬಹುದೆಂಬುದಕ್ಕೆ ಜಗತ್ತಿನಲ್ಲಿ ಹಲವಾರು ನಿದರ್ಶನಗಳಿವೆ. ಇದಕ್ಕೆ ಉತ್ತಮ ಉದಾಹರಣೆ ಇಟಲಿ, ಸ್ಪೇನ್, ದಕ್ಷಿಣ ಕೊರಿಯಾ ಹಾಗೂ ಧಾರಾವಿ ಕೊಳೆಗೇರಿ’ ಎಂದು ಹೇಳಿದ್ದಾರೆ.</p>.<p>‘ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಂಯೋಜಿಸಲ್ಪಟ್ಟ ಆಕ್ರಮಣಕಾರಿ ಕ್ರಮದಿಂದ ಮಾತ್ರ ಮಹಾಮಾರಿ ಕೋವಿಡ್ ಅನ್ನು ನಿಯಂತ್ರಿಸಬಹುದು. ಇದರಲ್ಲಿನಾಯಕತ್ವ, ಸಮುದಾಯ ಭಾಗವಹಿಸುವಿಕೆ ಮತ್ತು ಸಾಮೂಹಿಕ ಒಗ್ಗಟ್ಟಿನ ಪಾತ್ರ ಮಹತ್ವದ್ದು’ ಎಂದು ಹೇಳಿದರು.</p>.<p>ಧಾರಾವಿಯ ವಿಸ್ತೀರ್ಣ 2.5 ಚದರ ಕಿ.ಮೀ. ಇದ್ದು, ಇಲ್ಲಿ 6.50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ.</p>.<p>ಮುಂಬೈನಲ್ಲಿ ಮೊದಲ ಕೋವಿಡ್ ಪ್ರಕರಣ ದಾಖಲಾದ ಮೂರು ವಾರಗಳ ನಂತರ, ಏ.1 ರಂದು ಧಾರಾವಿಯಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾಗಿದೆ.</p>.<p>ಕೋವಿಡ್ ಹಾಟ್ಸ್ಪಾಟ್ ಆಗಿದ್ದ ಧಾರಾವಿಯಲ್ಲಿಜೂನ್ 9ರ ವೇಳೆಗೆ2,347 ಪ್ರಕರಣಗಳು ವರದಿಯಾಗಿದ್ದವು. ಸದ್ಯ ಇಲ್ಲಿ ಕೇವಲ 291 ಸಕ್ರಿಯ ಪ್ರಕರಣಗಳಿದ್ದು, 1,815 ಮಂದಿ ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>