<p class="title"><strong>ಮುಂಬೈ</strong>: ಕೋವಿಡ್–19 ರೋಗಿಗಳ ವಿವರಗಳನ್ನು ಬಹಿರಂಗಪಡಿಸುವುದರಿಂದ ವ್ಯಕ್ತಿಯ ಗೋಪ್ಯತೆ ಹಕ್ಕಿಗೆ ಧಕ್ಕೆಯಾಗುತ್ತದೆ. ಇಷ್ಟಕ್ಕೂ ಹೆಸರು ಬಹಿರಂಗಪಡಿಸುವ ಅಗತ್ಯವಾದರೂ ಏನಿದೆ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.</p>.<p>ಕೊರೊನಾ ಸೋಂಕಿತರ ಹೆಸರನ್ನು ಬಹಿರಂಗಪಡಿಸುವಂತೆ ಆದೇಶಿಸಬೇಕು ಎಂದು ಕೋರಿಕಾನೂನು ವಿದ್ಯಾರ್ಥಿ ವೈಷ್ಣವಿ ಘೋಲೆವ್ ಮತ್ತು ಸೋಲಾಪುರದ ರೈತ ಮಹೇಶ್ ಗಡೇಕರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎ. ಸೈಯದ್ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ವಿಭಾಗೀಯ ಪೀಠ,‘ವ್ಯಕ್ತಿ ಸೋಂಕಿಗೆ ಒಳಗಾದ ನಂತರ ಆ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ. ಇದರಿಂದ ಸ್ಥಳೀಯ ಜನರಿಗೆ ಮಾಹಿತಿ ತಲುಪಿ ಅವರು ಎಚ್ಚೆತ್ತುಕೊಳ್ಳುತ್ತಾರೆ. ಇಷ್ಟು ಸಾಲದೇ?’ ಎಂದು ತಿಳಿಸಿದೆ.</p>.<p>ಹೆಸರು ಬಹಿರಂಗ ಪಡಿಸುವುದರಿಂದ ಸೋಂಕಿತರ ಜೊತೆಗೆ ಸಂಪರ್ಕ ಹೊಂದಿದವರನ್ನು ಗುರುತಿಸುವುದು ಸುಲಭವಾಗುತ್ತದೆ. ಇದರಿಂದ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ಅರ್ಜಿದಾರರು ಪ್ರತಿಪಾದಿಸಿದರು.</p>.<p>ಈ ಸಂಬಂಧ, ಪ್ರತಿಕ್ರಿಯಿಸುವಂತೆಮಹಾರಾಷ್ಟ್ರ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ವಿಚಾರಣೆಯನ್ನು ಎರಡು ವಾರಗಳವರೆಗೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>: ಕೋವಿಡ್–19 ರೋಗಿಗಳ ವಿವರಗಳನ್ನು ಬಹಿರಂಗಪಡಿಸುವುದರಿಂದ ವ್ಯಕ್ತಿಯ ಗೋಪ್ಯತೆ ಹಕ್ಕಿಗೆ ಧಕ್ಕೆಯಾಗುತ್ತದೆ. ಇಷ್ಟಕ್ಕೂ ಹೆಸರು ಬಹಿರಂಗಪಡಿಸುವ ಅಗತ್ಯವಾದರೂ ಏನಿದೆ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.</p>.<p>ಕೊರೊನಾ ಸೋಂಕಿತರ ಹೆಸರನ್ನು ಬಹಿರಂಗಪಡಿಸುವಂತೆ ಆದೇಶಿಸಬೇಕು ಎಂದು ಕೋರಿಕಾನೂನು ವಿದ್ಯಾರ್ಥಿ ವೈಷ್ಣವಿ ಘೋಲೆವ್ ಮತ್ತು ಸೋಲಾಪುರದ ರೈತ ಮಹೇಶ್ ಗಡೇಕರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎ. ಸೈಯದ್ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ವಿಭಾಗೀಯ ಪೀಠ,‘ವ್ಯಕ್ತಿ ಸೋಂಕಿಗೆ ಒಳಗಾದ ನಂತರ ಆ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ. ಇದರಿಂದ ಸ್ಥಳೀಯ ಜನರಿಗೆ ಮಾಹಿತಿ ತಲುಪಿ ಅವರು ಎಚ್ಚೆತ್ತುಕೊಳ್ಳುತ್ತಾರೆ. ಇಷ್ಟು ಸಾಲದೇ?’ ಎಂದು ತಿಳಿಸಿದೆ.</p>.<p>ಹೆಸರು ಬಹಿರಂಗ ಪಡಿಸುವುದರಿಂದ ಸೋಂಕಿತರ ಜೊತೆಗೆ ಸಂಪರ್ಕ ಹೊಂದಿದವರನ್ನು ಗುರುತಿಸುವುದು ಸುಲಭವಾಗುತ್ತದೆ. ಇದರಿಂದ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ಅರ್ಜಿದಾರರು ಪ್ರತಿಪಾದಿಸಿದರು.</p>.<p>ಈ ಸಂಬಂಧ, ಪ್ರತಿಕ್ರಿಯಿಸುವಂತೆಮಹಾರಾಷ್ಟ್ರ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ವಿಚಾರಣೆಯನ್ನು ಎರಡು ವಾರಗಳವರೆಗೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>