ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎ. ಸೈಯದ್ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ವಿಭಾಗೀಯ ಪೀಠ,‘ವ್ಯಕ್ತಿ ಸೋಂಕಿಗೆ ಒಳಗಾದ ನಂತರ ಆ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ. ಇದರಿಂದ ಸ್ಥಳೀಯ ಜನರಿಗೆ ಮಾಹಿತಿ ತಲುಪಿ ಅವರು ಎಚ್ಚೆತ್ತುಕೊಳ್ಳುತ್ತಾರೆ. ಇಷ್ಟು ಸಾಲದೇ?’ ಎಂದು ತಿಳಿಸಿದೆ.