ಕಠ್ಮಂಡು: ಭಾರತದಿಂದ ನೇಪಾಳಿ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದು 12 ಮಂದಿ ಮೃತಪಟ್ಟ ಘಟನೆ ನೇಪಾಳದ ಬಂಕೆ ಜಿಲ್ಲೆಯಲ್ಲಿ ನಡೆದಿದೆ.
‘ಭಾನುವಾರ ತಡರಾತ್ರಿ ಸಲ್ಯಾನ್ ಮಾರ್ಗದ ಮೂಲಕ 30 ವಲಸೆ ಕಾರ್ಮಿಕರನ್ನು ತಾಯ್ನಡಿಗೆ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದರಲ್ಲಿ 12 ಮಂದಿ ಮೃತಪಟ್ಟಿದ್ದು, 22 ಮಂದಿಗೆ ಗಂಭೀರ ಗಾಯಗಳಾಗಿವೆ’ ಎಂದು ಅಧಿಕಾರಿಗಳು ತಿಳಿಸಿದರು.