ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ: ಐಪಿಎಸ್‌ ಅಧಿಕಾರಿಗೆ ಹಿಂಬಡ್ತಿ

Last Updated 12 ಜೂನ್ 2018, 18:37 IST
ಅಕ್ಷರ ಗಾತ್ರ

ಅಗರ್ತಲ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐನಿಂದ ವಿಚಾರಣೆ ಎದುರಿಸುತ್ತಿದ್ದರೂ ಹಿರಿಯ ಐಪಿಎಸ್‌ ಅಧಿಕಾರಿ ಕೆ. ನಾಗರಾಜ್ ಅವರಿಗೆ ನೀಡಲಾಗಿದ್ದ ಬಡ್ತಿಯನ್ನು ತ್ರಿಪುರಾ ಸರ್ಕಾರ ಹಿಂಪಡೆದಿದೆ.

ನಾಗರಾಜ್ ಅವರ ವಿರುದ್ಧ ಶಿಸ್ತು ಕ್ರಮ ಬಾಕಿ ಇದ್ದರೂ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಕಳೆದ ವಾರ ಆದೇಶ ಹೊರಡಿಸಿತ್ತು.

‘ಸಾರ್ವಜನಿಕ ಹಿತಾಸಕ್ತಿಯಿಂದಾಗಿ, ನಾಗರಾಜ್ ಅವರಿಗೆ ನೀಡಿದ್ದ ಬಡ್ತಿಯನ್ನು ತ್ರಿಪುರಾ ರಾಜ್ಯಪಾಲರು ರದ್ದುಪಡಿಸಿದ್ದಾರೆ’ ಎಂದು ಹೆಚ್ಚುವರಿ ಕಾರ್ಯದರ್ಶಿ ಸಂತೋಷ್ ದಾಸ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಐ‍ಪಿಎಸ್‌ ಕೇಡರ್ ನಿಯಂತ್ರಿಸುತ್ತಿರುವ ಗೃಹ ವ್ಯವಹಾರಗಳ ಸಚಿವಾಲಯ, ‘ಅಕ್ರಮ ಬಡ್ತಿ’ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿತ್ತು.

ಈ ಕುರಿತು ತಿದ್ದುಪಡಿ ಕ್ರಮ ಕೈಗೊಳ್ಳುವಂತೆ ಹಾಗೂ ಅಧಿಕಾರಿಗೆ ಐಜಿಪಿ ಹುದ್ದೆಗೆ ಹಿಂಬಡ್ತಿ ನೀಡುವಂತೆ ಸಚಿವಾಲಯ ತ್ರಿಪುರಾ ಸರ್ಕಾರಕ್ಕೆ ಆದೇಶಿಸಿತ್ತು. ನಂತರದಲ್ಲಿ ಈ ಬೆಳವಣಿಗೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT