<p><strong>ವಿಶ್ವಸಂಸ್ಥೆ:</strong> ಈ ಬಾರಿ ಸುರಿದ ಭಾರಿ ಮಳೆ ಹಾಗೂ ಪ್ರವಾಹಕ್ಕೆ ಭಾರತ, ಬಾಂಗ್ಲಾದೇಶ, ನೇಪಾಳ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಕನಿಷ್ಠ 600 ಮಂದಿ ಬಲಿಯಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.</p>.<p>ಪ್ರವಾಹದದಿಂದಾಗಿ ಎರಡೂವರೆ ಕೋಟಿಗಿಂತಲೂ ಹೆಚ್ಚು ಜನ ತೊಂದರೆ ಅನುಭವಿಸಿದ್ದಾರೆ ಎಂದು ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ತಿಳಿಸಿದ್ದಾರೆ.</p>.<p>ಐದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<p>ಈ ನಾಲ್ಕು ದೇಶಗಳ ಸರ್ಕಾರಗಳು ವಿಶ್ವಸಂಸ್ಥೆ ಹಾಗೂ ಇತರ ಸಂಸ್ಥೆಗಳ ನೆರವಿನೊಂದಿಗೆ ಪರಿಹಾರ ಕಾರ್ಯ ನಡೆಸುತ್ತಿವೆ ಎಂದಿದ್ದಾರೆ.</p>.<p>ಭಾರತದ ಪ್ರವಾಹ ಪೀಡಿತ ರಾಜ್ಯಗಳಾದ ಅಸ್ಸಾಂ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ರಾಜ್ಯ ಸರ್ಕಾರಗಳ ಜೊತೆ ಪರಿಹಾರ ಕಾರ್ಯಕ್ಕೆ ಯುನಿಸೆಫ್ ಕೈಜೋಡಿಸಿದೆ ಎಂದೂ ಹೇಳಿದ್ದಾರೆ.</p>.<p>ಕೆಲವು ಪ್ರದೇಶಗಳಲ್ಲಿ ಪ್ರವಾಹದ ಪರಿಣಾಮ ರಸ್ತೆ ಹಾಗೂ ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಇದರಿಂದ ರಕ್ಷಣಾ ಕಾರ್ಯಕರ್ತರಿಗೆ ಅಲ್ಲಿಗೆ ತೆರಳಲು ಸಾಧ್ಯವಾಗಿಲ್ಲ. ಇಂತಹ ಪ್ರದೇಶಗಳಲ್ಲಿ ಮುಖ್ಯವಾಗಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಆಹಾರದ ಅಗತ್ಯವಿದೆ ಎಂದು ಯುನಿಸೆಫ್ ಹೇಳಿದೆ.</p>.<p>40ಲಕ್ಷ ಮಕ್ಕಳೂ ಸೇರಿದಂತೆ ಭಾರತದಲ್ಲಿ ಒಂದು ಕೋಟಿಗಿಂತಲೂ ಅಧಿಕ ಜನರು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಈ ಬಾರಿ ಸುರಿದ ಭಾರಿ ಮಳೆ ಹಾಗೂ ಪ್ರವಾಹಕ್ಕೆ ಭಾರತ, ಬಾಂಗ್ಲಾದೇಶ, ನೇಪಾಳ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಕನಿಷ್ಠ 600 ಮಂದಿ ಬಲಿಯಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.</p>.<p>ಪ್ರವಾಹದದಿಂದಾಗಿ ಎರಡೂವರೆ ಕೋಟಿಗಿಂತಲೂ ಹೆಚ್ಚು ಜನ ತೊಂದರೆ ಅನುಭವಿಸಿದ್ದಾರೆ ಎಂದು ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ತಿಳಿಸಿದ್ದಾರೆ.</p>.<p>ಐದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<p>ಈ ನಾಲ್ಕು ದೇಶಗಳ ಸರ್ಕಾರಗಳು ವಿಶ್ವಸಂಸ್ಥೆ ಹಾಗೂ ಇತರ ಸಂಸ್ಥೆಗಳ ನೆರವಿನೊಂದಿಗೆ ಪರಿಹಾರ ಕಾರ್ಯ ನಡೆಸುತ್ತಿವೆ ಎಂದಿದ್ದಾರೆ.</p>.<p>ಭಾರತದ ಪ್ರವಾಹ ಪೀಡಿತ ರಾಜ್ಯಗಳಾದ ಅಸ್ಸಾಂ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ರಾಜ್ಯ ಸರ್ಕಾರಗಳ ಜೊತೆ ಪರಿಹಾರ ಕಾರ್ಯಕ್ಕೆ ಯುನಿಸೆಫ್ ಕೈಜೋಡಿಸಿದೆ ಎಂದೂ ಹೇಳಿದ್ದಾರೆ.</p>.<p>ಕೆಲವು ಪ್ರದೇಶಗಳಲ್ಲಿ ಪ್ರವಾಹದ ಪರಿಣಾಮ ರಸ್ತೆ ಹಾಗೂ ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಇದರಿಂದ ರಕ್ಷಣಾ ಕಾರ್ಯಕರ್ತರಿಗೆ ಅಲ್ಲಿಗೆ ತೆರಳಲು ಸಾಧ್ಯವಾಗಿಲ್ಲ. ಇಂತಹ ಪ್ರದೇಶಗಳಲ್ಲಿ ಮುಖ್ಯವಾಗಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಆಹಾರದ ಅಗತ್ಯವಿದೆ ಎಂದು ಯುನಿಸೆಫ್ ಹೇಳಿದೆ.</p>.<p>40ಲಕ್ಷ ಮಕ್ಕಳೂ ಸೇರಿದಂತೆ ಭಾರತದಲ್ಲಿ ಒಂದು ಕೋಟಿಗಿಂತಲೂ ಅಧಿಕ ಜನರು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>