<p><strong>ಕರಾಚಿ:</strong> ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ನಡೆಯುತ್ತಿದ್ದಾಗ ಆತ್ಮಾಹುತಿ ದಳ ಬಾಂಬ್ ಸ್ಫೋಟ ನಡೆಸಿದೆ. ಈ ಬಾಂಬ್ ಸ್ಫೋಟದಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ 8 ಜನರು ಸಾವಿಗೀಡಾಗಿದ್ದು 23 ಮಂದಿಗೆ ಗಾಯಗಳಾಗಿವೆ.</p>.<p>ಶಹರನ್ ಇ ಅದಾಲತ್ ರಸ್ತೆ ಬಳಿ ಇರುವ ಕ್ವೆಟ್ಟಾ ಪ್ರೆಸ್ ಕ್ಲಬ್ ಬಳಿ ಸೋಮವಾರ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ವೇಳೆ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಹಲವಾರು ವಾಹನಗಳಿಗೆ ಹಾನಿಯಾಗಿದೆ ಎಂದು ಡಾನ್ ಸುದ್ದಿಪತ್ರಿಕೆ ವರದಿ ಮಾಡಿದೆ.</p>.<p>ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟನಿಯೊ ಗುಟೇರಸ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ದಿನವೇ ಈ ದಾಳಿ ನಡೆದಿದೆ. ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಶೋಧ ಕಾರ್ಯ ಮುಂದುವರಿದಿದೆ. ಆದಾಗ್ಯೂ, ಸ್ಫೋಟದ ಸ್ವರೂಪ ಇಲ್ಲಿಯವರೆಗೆ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮೂವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 8 ಮಂದಿ ಸಾವಿಗೀಡಾಗಿದ್ದು, 23 ಮಂದಿಗೆ ಗಾಯಗಳಾಗಿವೆ ಎಂದು ದುನಿಯಾ ನ್ಯೂಸ್ ವರದಿ ಮಾಡಿದೆ.ಯಾವುದೇ ಸಂಘಟನೆಗಳು ಇಲ್ಲಿಯವರಿಗೆ ದಾಳಿಯ ಹೊಣೆ ಹೊತ್ತಿಲ್ಲ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ:</strong> ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ನಡೆಯುತ್ತಿದ್ದಾಗ ಆತ್ಮಾಹುತಿ ದಳ ಬಾಂಬ್ ಸ್ಫೋಟ ನಡೆಸಿದೆ. ಈ ಬಾಂಬ್ ಸ್ಫೋಟದಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ 8 ಜನರು ಸಾವಿಗೀಡಾಗಿದ್ದು 23 ಮಂದಿಗೆ ಗಾಯಗಳಾಗಿವೆ.</p>.<p>ಶಹರನ್ ಇ ಅದಾಲತ್ ರಸ್ತೆ ಬಳಿ ಇರುವ ಕ್ವೆಟ್ಟಾ ಪ್ರೆಸ್ ಕ್ಲಬ್ ಬಳಿ ಸೋಮವಾರ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ವೇಳೆ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಹಲವಾರು ವಾಹನಗಳಿಗೆ ಹಾನಿಯಾಗಿದೆ ಎಂದು ಡಾನ್ ಸುದ್ದಿಪತ್ರಿಕೆ ವರದಿ ಮಾಡಿದೆ.</p>.<p>ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟನಿಯೊ ಗುಟೇರಸ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ದಿನವೇ ಈ ದಾಳಿ ನಡೆದಿದೆ. ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಶೋಧ ಕಾರ್ಯ ಮುಂದುವರಿದಿದೆ. ಆದಾಗ್ಯೂ, ಸ್ಫೋಟದ ಸ್ವರೂಪ ಇಲ್ಲಿಯವರೆಗೆ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮೂವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 8 ಮಂದಿ ಸಾವಿಗೀಡಾಗಿದ್ದು, 23 ಮಂದಿಗೆ ಗಾಯಗಳಾಗಿವೆ ಎಂದು ದುನಿಯಾ ನ್ಯೂಸ್ ವರದಿ ಮಾಡಿದೆ.ಯಾವುದೇ ಸಂಘಟನೆಗಳು ಇಲ್ಲಿಯವರಿಗೆ ದಾಳಿಯ ಹೊಣೆ ಹೊತ್ತಿಲ್ಲ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>