ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಾಲಯ ಶುಚಿಗೊಳಿಸಿಕೊಂಡ ಸಾರ್ವಜನಿಕರು

Last Updated 7 ಮಾರ್ಚ್ 2018, 10:37 IST
ಅಕ್ಷರ ಗಾತ್ರ

ಕಾರವಾರ: ಪಾಳು ಬಿದ್ದಿದ್ದ ನಗರದ ಬೈತಖೋಲ್ ವಾರ್ಡಿನ ಸಾರ್ವಜನಿಕ ಶೌಚಾಲಯಕ್ಕೆ ಮಂಗಳವಾರ ಸಾರ್ವಜನಿಕರೇ ತಮ್ಮ ಸ್ವಂತ ಖರ್ಚಿನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿಕೊಂಡು, ಶುಚಿಗೊಳಿಸಿಕೊಂಡಿದ್ದಾರೆ.

ಶೌಚಾಲಯದ ಛೇಂಬರ್ ಒಡೆದು ಕಳೆದ ೬ ತಿಂಗಳಿನಿಂದ ಉಪಯೋಗಕ್ಕೆ ಬಾರದೇ ಅದು ಪಾಳು ಬಿದ್ದಿತ್ತು. ಈ ಬಗ್ಗೆ ನಗರಸಭೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನಕ್ಕೆ ಬಂದಿರಲಿಲ್ಲ. ಬಳಿಕ ವಾರ್ಡ್ ಸದಸ್ಯ ಪ್ರಶಾಂತ ಹರಿಕಂತ್ರ ಅವರು ಇತ್ತೀಚಿಗೆ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದು ಪತ್ರಿಕೆಗಳಲ್ಲಿಯೂ ಪ್ರಕಟಗೊಂಡಿತ್ತು.

ಇದಾದ ನಂತರ ಕೆಲವೇ ದಿನಗಳಲ್ಲಿ ನಗರಸಭೆಯ ಅಧ್ಯಕ್ಷ, ಪೌರಾಯುಕ್ತ ಹಾಗೂ ಇತರೆ ಕೆಲ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಶೌಚಾಲಯದ ಛೇಂಬರ್‌ ದುರಸ್ತಿ ಮಾಡಿಸಿಕೊಟ್ಟಿದ್ದರು. ಬಳಿಕ ಸಾರ್ವಜನಿಕರೇ ಮತ್ತೆ ಅಧಿಕಾರಿಗಳಿಗಾಗಿ ಕಾಯದೇ, ತಾವೇ ನೀರಿನ ಸಂಪರ್ಕ ಕಲ್ಪಿಸಿಕೊಂಡಿದ್ದಾರೆ. ವಾರ್ಡ್ ಸದಸ್ಯ ಪ್ರಶಾಂತ ಹರಿಕಂತ್ರ ಸೇರಿದಂತೆ ಅನೇಕರು ಶೌಚಾಲಯ ಶುಚಿಗೊಳಿಸಿ, ಉಪಯೋಗಕ್ಕೆ ಯೋಗ್ಯವಾಗಿರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT