<p><strong>ವಾಷಿಂಗ್ಟನ್:</strong> ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆದ್ವಿಪಕ್ಷೀಯ ಮಾತುಕತೆ ಅಗತ್ಯವಿದ್ದರೆ, ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ಇರಲಿದೆ ಎಂದು ಭಾರತ ಸ್ಪಷ್ಟಪಡಿಸಿದೆ.</p>.<p>‘ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದುಭಾರತ ಹಾಗೂ ಪಾಕಿಸ್ತಾನ ಸರ್ಕಾರ ಇಚ್ಛಿಸಿದಲ್ಲಿ ನಾನು ಸಿದ್ಧನಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿಕೆ ನೀಡಿದ್ದರು. ಇದರಬೆನ್ನಲ್ಲೇ ವಿದೇಶಾಂಗ ಸಚಿವ ಜೈಶಂಕರ್ಅಮೆರಿಕದ ಮಧ್ಯಸ್ಥಿಕೆ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ.</p>.<p>ಬ್ಯಾಂಕಾಕ್ನಲ್ಲಿ ನಡೆ ಯುತ್ತಿರುವ9ನೇ ಪೂರ್ವ ಏಷ್ಯಾ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ, ಅಮೆರಿಕ ವಿದೇಶಾಂಗ ಸಚಿವ ಮೈಕ್ ಪಾಂಪಿಯೊ ಅವರನ್ನು ಭೇಟಿಯಾಗಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.</p>.<p>‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯುವುದಿದ್ದರೆ ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ನಡೆಯಲಿದೆ ಎನ್ನುವುದನ್ನು ಸ್ಪಷ್ಟವಾಗಿಪಾಂಪಿಯೊ ಅವರಿಗೆತಿಳಿಸಿದ್ದೇನೆ’ ಎಂದು ಶುಕ್ರವಾರಟ್ವೀಟ್ ಮೂಲಕ ಜೈಶಂಕರ್ ತಿಳಿಸಿದ್ದಾರೆ.</p>.<p><strong>ಮಧ್ಯಸ್ಥಿಕೆಗೆ ಆಗ್ರಹಿಸಿದ್ದ ಮೋದಿ:</strong> ಜುಲೈ 22ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭೇಟಿ ನಂತರ ಶ್ವೇತ ಭವನದಲ್ಲಿಜಂಟಿ ಸುದ್ದಿಗೋಷ್ಠಿ ನಡೆಸಿದ್ದ ಟ್ರಂಪ್, ‘ ಜಪಾನ್ನಲ್ಲಿ ಜೂನ್ನಲ್ಲಿಜಿ–20 ಶೃಂಗಸಭೆ ನಡೆದ ಸಂದರ್ಭದಲ್ಲಿಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಕೇಳಿ ಕೊಂಡಿದ್ದರು’ ಎಂದು ಹೇಳಿಕೆ ನೀಡಿ ದ್ದರು. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೊಳಗಾಗಿತ್ತು. ಆದರೆ ಭಾರತ ಈ ಹೇಳಿಕೆಯನ್ನು ನಿರಾಕರಿಸಿ, ಮೋದಿ ಮತ್ತು ಟ್ರಂಪ್ ನಡುವೆ ಕಾಶ್ಮೀರದ ವಿಷಯವೇ ಚರ್ಚೆಯಾಗಿರಲಿಲ್ಲ ಎಂದಿತ್ತು. ಸಂಸತ್ತಿನಲ್ಲಿ ಈ ಕುರಿತು ಜೈಶಂಕರ್ ಸ್ಪಷ್ಟನೆಯನ್ನೂ ನೀಡಿದ್ದರು.</p>.<p>‘ಪಾಕಿಸ್ತಾನದ ಜತೆ ಮಾತುಕತೆ ನಡೆಸಬೇಕೆಂದರೆ ಮೊದಲು ಗಡಿಯಲ್ಲಿನ ಭಯೋತ್ಪಾದನಾ ಚಟುವಟಿಕೆಗಳನ್ನು ಅಂತ್ಯಗೊಳಿಸಬೇಕು’ ಎಂದು ಉಲ್ಲೇಖಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆದ್ವಿಪಕ್ಷೀಯ ಮಾತುಕತೆ ಅಗತ್ಯವಿದ್ದರೆ, ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ಇರಲಿದೆ ಎಂದು ಭಾರತ ಸ್ಪಷ್ಟಪಡಿಸಿದೆ.</p>.<p>‘ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದುಭಾರತ ಹಾಗೂ ಪಾಕಿಸ್ತಾನ ಸರ್ಕಾರ ಇಚ್ಛಿಸಿದಲ್ಲಿ ನಾನು ಸಿದ್ಧನಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿಕೆ ನೀಡಿದ್ದರು. ಇದರಬೆನ್ನಲ್ಲೇ ವಿದೇಶಾಂಗ ಸಚಿವ ಜೈಶಂಕರ್ಅಮೆರಿಕದ ಮಧ್ಯಸ್ಥಿಕೆ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ.</p>.<p>ಬ್ಯಾಂಕಾಕ್ನಲ್ಲಿ ನಡೆ ಯುತ್ತಿರುವ9ನೇ ಪೂರ್ವ ಏಷ್ಯಾ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ, ಅಮೆರಿಕ ವಿದೇಶಾಂಗ ಸಚಿವ ಮೈಕ್ ಪಾಂಪಿಯೊ ಅವರನ್ನು ಭೇಟಿಯಾಗಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.</p>.<p>‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯುವುದಿದ್ದರೆ ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ನಡೆಯಲಿದೆ ಎನ್ನುವುದನ್ನು ಸ್ಪಷ್ಟವಾಗಿಪಾಂಪಿಯೊ ಅವರಿಗೆತಿಳಿಸಿದ್ದೇನೆ’ ಎಂದು ಶುಕ್ರವಾರಟ್ವೀಟ್ ಮೂಲಕ ಜೈಶಂಕರ್ ತಿಳಿಸಿದ್ದಾರೆ.</p>.<p><strong>ಮಧ್ಯಸ್ಥಿಕೆಗೆ ಆಗ್ರಹಿಸಿದ್ದ ಮೋದಿ:</strong> ಜುಲೈ 22ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭೇಟಿ ನಂತರ ಶ್ವೇತ ಭವನದಲ್ಲಿಜಂಟಿ ಸುದ್ದಿಗೋಷ್ಠಿ ನಡೆಸಿದ್ದ ಟ್ರಂಪ್, ‘ ಜಪಾನ್ನಲ್ಲಿ ಜೂನ್ನಲ್ಲಿಜಿ–20 ಶೃಂಗಸಭೆ ನಡೆದ ಸಂದರ್ಭದಲ್ಲಿಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಕೇಳಿ ಕೊಂಡಿದ್ದರು’ ಎಂದು ಹೇಳಿಕೆ ನೀಡಿ ದ್ದರು. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೊಳಗಾಗಿತ್ತು. ಆದರೆ ಭಾರತ ಈ ಹೇಳಿಕೆಯನ್ನು ನಿರಾಕರಿಸಿ, ಮೋದಿ ಮತ್ತು ಟ್ರಂಪ್ ನಡುವೆ ಕಾಶ್ಮೀರದ ವಿಷಯವೇ ಚರ್ಚೆಯಾಗಿರಲಿಲ್ಲ ಎಂದಿತ್ತು. ಸಂಸತ್ತಿನಲ್ಲಿ ಈ ಕುರಿತು ಜೈಶಂಕರ್ ಸ್ಪಷ್ಟನೆಯನ್ನೂ ನೀಡಿದ್ದರು.</p>.<p>‘ಪಾಕಿಸ್ತಾನದ ಜತೆ ಮಾತುಕತೆ ನಡೆಸಬೇಕೆಂದರೆ ಮೊದಲು ಗಡಿಯಲ್ಲಿನ ಭಯೋತ್ಪಾದನಾ ಚಟುವಟಿಕೆಗಳನ್ನು ಅಂತ್ಯಗೊಳಿಸಬೇಕು’ ಎಂದು ಉಲ್ಲೇಖಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>