<p><strong>ದುಬೈ: </strong>ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುವ ಅಗತ್ಯ ಏನಿತ್ತು ಎಂದುಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪ್ರಶ್ನಿಸಿದ್ದಾರೆ. ಭಾರತದಲ್ಲಿ ನೆಲೆಯಾಗಿರುವ ಬಾಂಗ್ಲಾ ಮೂಲ ನಿವಾಸಿಗಳು ವಾಪಸಾಗಿರುವ ಒಂದು ಪ್ರಕರಣವೂ ವರದಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ.</p>.<p>ಸಿಎಎಯಿಂದಾಗಿ ಭಾರತದಲ್ಲಿ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಗಲ್ಫ್ನ್ಯೂಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ಸಿಎಎ ಬಗ್ಗೆ ಬಾಂಗ್ಲಾ ದೇಶದ ಪ್ರಧಾನಿ ಮಾತನಾಡಿದ್ದು ಇದೇ ಮೊದಲು.</p>.<p>ಈ ಕಾಯ್ದೆಯ ಬಗ್ಗೆ ಬಾಂಗ್ಲಾದೇಶದಲ್ಲಿ ಸಾಕಷ್ಟು ಅಸಮಾಧಾನ ವ್ಯಕ್ತವಾಗಿವೆ. ಭಾರತವು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಬಳಿಕ ಬಾಂಗ್ಲಾ ದೇಶದ ಮೂವರು ಮಂತ್ರಿಗಳು ಭಾರತಕ್ಕೆ ಭೇಟಿ ನೀಡುವ ಅಧಿಕೃತ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ.</p>.<p>ಈ ಕಾಯ್ದೆಯನ್ನು ಆತುರಾತುರವಾಗಿ ಜಾರಿ ಮಾಡುವ ಅಗತ್ಯ ಏನಿತ್ತು ಎಂಬುದು ತಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಲ್ಲಿ ಧಾರ್ಮಿಕ ನೆಲೆಯಲ್ಲಿ ಕಿರುಕುಳಕ್ಕೆ ಒಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಿಕೆಯನ್ನು ತ್ವರಿತಗೊಳಿಸುವುದು ಕಾಯ್ದೆಯ ಉದ್ದೇಶ. ಪಾಕಿಸ್ತಾನದ ಜತೆಗೆ ಬಾಂಗ್ಲಾದೇಶವನ್ನು ಯಾಕೆ ಸೇರಿಸಲಾಗಿದೆ ಎಂಬ ಪ್ರಶ್ನೆಯನ್ನು ಬಾಂಗ್ಲಾ ನಾಯಕಿ ಕೇಳುತ್ತಿದ್ದಾರೆ.</p>.<p>ಸಿಎಎ ಮತ್ತುರಾಷ್ಟ್ರೀಯ ಪೌರತ್ವ ನೋಂದಣಿಯಂತಹ (ಎನ್ ಆರ್ ಸಿ ) ವಿಚಾರಗಳು ಭಾರತದ ಆಂತರಿಕ ವಿಷಯ ಎಂದೂ ಶೇಖ್ ಹಸೀನಾ ಅಭಿಪ್ರಾಯಪಟ್ಟಿದ್ದಾರೆ. ಬಾಂಗ್ಲಾ ದೇಶದ ಜನಸಂಖ್ಯೆಯಲ್ಲಿ ಶೇ 10.7ರಷ್ಟು ಹಿಂದೂಗಳಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದುಗಳಿಗೆ ಕಿರುಕುಳ ನೀಡಿದ ಘಟನೆಗಳು ವರದಿಯಾಗಿಲ್ಲ ಎಂದಿದ್ದಾರೆ.</p>.<p>ಮ್ಯಾನ್ಮಾರ್ ನಿಂದ ವಾಪಸಾಗಿರುವರೋಹಿಂಗ್ಯಾ ನಿರಾಶ್ರಿತರಿಗೆ ಬಾಂಗ್ಲಾ ಕಾಕ್ಸ್ ಬಜಾರ್ ಕ್ಯಾಂಪ್ ನಲ್ಲಿ ಆಶ್ರಯ ನೀಡಿರುವುದಾಗಿ ಶೇಖ್ ಹಸೀನಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="http://ಬಾಂಗ್ಲಾ ವಲಸಿಗರಿಗೆ ‘ಸ್ವಾತಂತ್ರ್ಯದ ಸಂಭ್ರಮ’" target="_blank">ಬಾಂಗ್ಲಾ ವಲಸಿಗರಿಗೆ ‘ಸ್ವಾತಂತ್ರ್ಯದ ಸಂಭ್ರಮ’</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ: </strong>ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುವ ಅಗತ್ಯ ಏನಿತ್ತು ಎಂದುಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪ್ರಶ್ನಿಸಿದ್ದಾರೆ. ಭಾರತದಲ್ಲಿ ನೆಲೆಯಾಗಿರುವ ಬಾಂಗ್ಲಾ ಮೂಲ ನಿವಾಸಿಗಳು ವಾಪಸಾಗಿರುವ ಒಂದು ಪ್ರಕರಣವೂ ವರದಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ.</p>.<p>ಸಿಎಎಯಿಂದಾಗಿ ಭಾರತದಲ್ಲಿ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಗಲ್ಫ್ನ್ಯೂಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ಸಿಎಎ ಬಗ್ಗೆ ಬಾಂಗ್ಲಾ ದೇಶದ ಪ್ರಧಾನಿ ಮಾತನಾಡಿದ್ದು ಇದೇ ಮೊದಲು.</p>.<p>ಈ ಕಾಯ್ದೆಯ ಬಗ್ಗೆ ಬಾಂಗ್ಲಾದೇಶದಲ್ಲಿ ಸಾಕಷ್ಟು ಅಸಮಾಧಾನ ವ್ಯಕ್ತವಾಗಿವೆ. ಭಾರತವು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಬಳಿಕ ಬಾಂಗ್ಲಾ ದೇಶದ ಮೂವರು ಮಂತ್ರಿಗಳು ಭಾರತಕ್ಕೆ ಭೇಟಿ ನೀಡುವ ಅಧಿಕೃತ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ.</p>.<p>ಈ ಕಾಯ್ದೆಯನ್ನು ಆತುರಾತುರವಾಗಿ ಜಾರಿ ಮಾಡುವ ಅಗತ್ಯ ಏನಿತ್ತು ಎಂಬುದು ತಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಲ್ಲಿ ಧಾರ್ಮಿಕ ನೆಲೆಯಲ್ಲಿ ಕಿರುಕುಳಕ್ಕೆ ಒಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಿಕೆಯನ್ನು ತ್ವರಿತಗೊಳಿಸುವುದು ಕಾಯ್ದೆಯ ಉದ್ದೇಶ. ಪಾಕಿಸ್ತಾನದ ಜತೆಗೆ ಬಾಂಗ್ಲಾದೇಶವನ್ನು ಯಾಕೆ ಸೇರಿಸಲಾಗಿದೆ ಎಂಬ ಪ್ರಶ್ನೆಯನ್ನು ಬಾಂಗ್ಲಾ ನಾಯಕಿ ಕೇಳುತ್ತಿದ್ದಾರೆ.</p>.<p>ಸಿಎಎ ಮತ್ತುರಾಷ್ಟ್ರೀಯ ಪೌರತ್ವ ನೋಂದಣಿಯಂತಹ (ಎನ್ ಆರ್ ಸಿ ) ವಿಚಾರಗಳು ಭಾರತದ ಆಂತರಿಕ ವಿಷಯ ಎಂದೂ ಶೇಖ್ ಹಸೀನಾ ಅಭಿಪ್ರಾಯಪಟ್ಟಿದ್ದಾರೆ. ಬಾಂಗ್ಲಾ ದೇಶದ ಜನಸಂಖ್ಯೆಯಲ್ಲಿ ಶೇ 10.7ರಷ್ಟು ಹಿಂದೂಗಳಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದುಗಳಿಗೆ ಕಿರುಕುಳ ನೀಡಿದ ಘಟನೆಗಳು ವರದಿಯಾಗಿಲ್ಲ ಎಂದಿದ್ದಾರೆ.</p>.<p>ಮ್ಯಾನ್ಮಾರ್ ನಿಂದ ವಾಪಸಾಗಿರುವರೋಹಿಂಗ್ಯಾ ನಿರಾಶ್ರಿತರಿಗೆ ಬಾಂಗ್ಲಾ ಕಾಕ್ಸ್ ಬಜಾರ್ ಕ್ಯಾಂಪ್ ನಲ್ಲಿ ಆಶ್ರಯ ನೀಡಿರುವುದಾಗಿ ಶೇಖ್ ಹಸೀನಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="http://ಬಾಂಗ್ಲಾ ವಲಸಿಗರಿಗೆ ‘ಸ್ವಾತಂತ್ರ್ಯದ ಸಂಭ್ರಮ’" target="_blank">ಬಾಂಗ್ಲಾ ವಲಸಿಗರಿಗೆ ‘ಸ್ವಾತಂತ್ರ್ಯದ ಸಂಭ್ರಮ’</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>