<p><strong>ಢಾಕಾ: </strong>ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ ಅವರ ಮೇಲೆ 25 ವರ್ಷಗಳ ಹಿಂದೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ನ್ಯಾಯಾಲಯ ಬುಧವಾರ, ಬಿಎನ್ಪಿ ನೇತೃತ್ವದ ಮೈತ್ರಿಕೂಟದ 9 ಕಾರ್ಯಕರ್ತರಿಗೆ ಮರಣದಂಡನೆ ಹಾಗೂ ಇತರ 25 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.</p>.<p>25 ವರ್ಷಗಳ ಹಿಂದೆ ಹಸೀನಾ ವಿರೋಧಪಕ್ಷದ ನಾಯಕಿಯಾಗಿದ್ದಾಗ ದಾಳಿ ಪ್ರಕರಣ ನಡೆದಿತ್ತು. ಸೆಪ್ಟೆಂಬರ್ 23, 1994ರಂದು ಪಬ್ನಾದ ಈಶ್ವರ್ಡೆಗೆ ಪ್ರಚಾರಕ್ಕೆ ತೆರಳಿದ್ದಾಗ ಹಸೀನಾ ಅವರಿದ್ದ ರೈಲಿನ ಮೇಲೆ ದಾಳಿ ನಡೆದಿತ್ತು.ದಾಳಿಯಲ್ಲಿ ಹಸೀನಾ ಬದುಕುಳಿದಿದ್ದರು. ಆ ಸಂದರ್ಭದಲ್ಲಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ (ಬಿಎನ್ಪಿ) ಬೇಗಂ ಖಾಲಿದಾ ಜಿಯಾ ಪ್ರಧಾನಿಯಾಗಿದ್ದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ನಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಮೂರ್ತಿ ರೋಸ್ಟಮ್ ಅಲಿ, 9 ಮಂದಿಗೆ ಮರಣದಂಡನೆ, 25 ಮಂದಿಗೆ ಜೀವಾವಧಿ ಹಾಗೂ ಇತರ 13 ಮಂದಿಗೆ 10 ವರ್ಷಗಳ ಜೈಲುಶಿಕ್ಷೆ ವಿಧಿಸಿದ್ದಾರೆ. ದಾಳಿಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಒಟ್ಟು 135 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು.</p>.<p>ತೀರ್ಪು ವಿರೋಧಿಸಿ ಬಿಎನ್ಪಿ ಕಾರ್ಯಕರ್ತರು ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಅವಾಮಿ ಲೀಗ್ನ ಕಾರ್ಯಕರ್ತರುಮತ್ತು ಬೆಂಬಲಿಗರು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ, ಮೆರವಣಿಗೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ: </strong>ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ ಅವರ ಮೇಲೆ 25 ವರ್ಷಗಳ ಹಿಂದೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ನ್ಯಾಯಾಲಯ ಬುಧವಾರ, ಬಿಎನ್ಪಿ ನೇತೃತ್ವದ ಮೈತ್ರಿಕೂಟದ 9 ಕಾರ್ಯಕರ್ತರಿಗೆ ಮರಣದಂಡನೆ ಹಾಗೂ ಇತರ 25 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.</p>.<p>25 ವರ್ಷಗಳ ಹಿಂದೆ ಹಸೀನಾ ವಿರೋಧಪಕ್ಷದ ನಾಯಕಿಯಾಗಿದ್ದಾಗ ದಾಳಿ ಪ್ರಕರಣ ನಡೆದಿತ್ತು. ಸೆಪ್ಟೆಂಬರ್ 23, 1994ರಂದು ಪಬ್ನಾದ ಈಶ್ವರ್ಡೆಗೆ ಪ್ರಚಾರಕ್ಕೆ ತೆರಳಿದ್ದಾಗ ಹಸೀನಾ ಅವರಿದ್ದ ರೈಲಿನ ಮೇಲೆ ದಾಳಿ ನಡೆದಿತ್ತು.ದಾಳಿಯಲ್ಲಿ ಹಸೀನಾ ಬದುಕುಳಿದಿದ್ದರು. ಆ ಸಂದರ್ಭದಲ್ಲಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ (ಬಿಎನ್ಪಿ) ಬೇಗಂ ಖಾಲಿದಾ ಜಿಯಾ ಪ್ರಧಾನಿಯಾಗಿದ್ದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ನಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಮೂರ್ತಿ ರೋಸ್ಟಮ್ ಅಲಿ, 9 ಮಂದಿಗೆ ಮರಣದಂಡನೆ, 25 ಮಂದಿಗೆ ಜೀವಾವಧಿ ಹಾಗೂ ಇತರ 13 ಮಂದಿಗೆ 10 ವರ್ಷಗಳ ಜೈಲುಶಿಕ್ಷೆ ವಿಧಿಸಿದ್ದಾರೆ. ದಾಳಿಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಒಟ್ಟು 135 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು.</p>.<p>ತೀರ್ಪು ವಿರೋಧಿಸಿ ಬಿಎನ್ಪಿ ಕಾರ್ಯಕರ್ತರು ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಅವಾಮಿ ಲೀಗ್ನ ಕಾರ್ಯಕರ್ತರುಮತ್ತು ಬೆಂಬಲಿಗರು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ, ಮೆರವಣಿಗೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>