<p class="title"><strong>ಬೀಜಿಂಗ್: </strong>ಲಡಾಖ್ನ ಗಾಲ್ವನ್ ಕಣಿವೆ ಮೇಲಿನ ಸಾರ್ವಭೌಮತೆಯನ್ನು ಪ್ರತಿಪಾದಿಸಿರುವ ಚೀನಾ, ಆ ಪ್ರದೇಶ ಎಂದಿಗೂ ತನ್ನದು ಎಂದು ಸ್ಪಷ್ಟಪಡಿಸಿದೆ.</p>.<p class="title">ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನಾ ವಿದೇಶಾಂಗ ಇಲಾಖೆ ವಕ್ತಾರ ಝಾವೊ ಲಿಜಿಯಾನ್, ಗಾಲ್ವನ್ ಕಣಿವೆ ವಿಷಯವಾಗಿ ನಾವು ಸೇನೆ ಹಾಗೂ ರಾಜತಾಂತ್ರಿಕ ಮಾರ್ಗದಲ್ಲಿ ಮಾತುಕತೆ ನಡೆಸುತ್ತಿದ್ದೇವೆ. ಘಟನೆ ನಡೆದಿರುವುದು ಚೀನಾಕ್ಕೆ ಸೇರಿದ ಜಾಗದಲ್ಲಿ. ಇದಕ್ಕಾಗಿ ಚೀನಾವನ್ನು ದೂಷಿಸಬೇಕಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p class="title">ಸಂಘರ್ಷದ ವೇಳೆ ಚೀನಾದ 43 ಸೈನಿಕರಿಗೆ ಸಾವು ನೋವು ಸಂಭವಿಸಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ‘ಗಡಿ ಭದ್ರತಾ ಪಡೆಗಳು ಪರಿಸ್ಥಿತಿಯನ್ನು ನಿಭಾಯಿಸುತ್ತಿವೆ’ ಎಂದಷ್ಟೇ ಹೇಳಿದ್ದಾರೆ.</p>.<p class="title">ಎಷ್ಟು ಯೋಧರು ಮೃತಪಟ್ಟಿದ್ದಾರೆ ಎಂದು ಭಾರತತಿಳಿಸಿದೆ. ಆದರೆ ಚೀನಾ ಏಕೆ ಸುಮ್ಮನಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸ್ಥಳೀಯ ಪರಿಸ್ಥಿತಿಯನ್ನು ಎರಡೂ ದೇಶಗಳ ಸೇನೆಗಳು ನಿಭಾಯಿಸುತ್ತಿವೆ. ಈ ಕ್ಷಣದಲ್ಲಿ ನಾನು ಏನನ್ನೂ ಹೇಳಲು ಬಯಸುವುದಿಲ್ಲ’ ಎಂದು ಲಿಜಿಯಾನ್ ಹೇಳಿದರು.</p>.<p class="title">‘ಒಟ್ಟಾರೆಯಾಗಿ ಗಡಿ ಪರಿಸ್ಥಿತಿ ಸ್ಥಿರವಾಗಿದ್ದು, ನಿಯಂತ್ರಣದಲ್ಲಿದೆ. ವಿವಾದ ಬಗೆಹರಿಸಿಕೊಳ್ಳಲು ಎರಡೂ ಕಡೆಯ ಸೇನೆ ಹಾಗೂ ರಾಜತಾಂತ್ರಿಕ ಅಧಿಕಾರಿಗಳು ಸಂವಹನದಲ್ಲಿ ತೊಡಗಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p class="title">ಮುಂದೆ ಇಂತಹ ಸಂಘರ್ಷಗಳನ್ನು ಚೀನಾ ಎದುರು ನೋಡುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬೀಜಿಂಗ್: </strong>ಲಡಾಖ್ನ ಗಾಲ್ವನ್ ಕಣಿವೆ ಮೇಲಿನ ಸಾರ್ವಭೌಮತೆಯನ್ನು ಪ್ರತಿಪಾದಿಸಿರುವ ಚೀನಾ, ಆ ಪ್ರದೇಶ ಎಂದಿಗೂ ತನ್ನದು ಎಂದು ಸ್ಪಷ್ಟಪಡಿಸಿದೆ.</p>.<p class="title">ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನಾ ವಿದೇಶಾಂಗ ಇಲಾಖೆ ವಕ್ತಾರ ಝಾವೊ ಲಿಜಿಯಾನ್, ಗಾಲ್ವನ್ ಕಣಿವೆ ವಿಷಯವಾಗಿ ನಾವು ಸೇನೆ ಹಾಗೂ ರಾಜತಾಂತ್ರಿಕ ಮಾರ್ಗದಲ್ಲಿ ಮಾತುಕತೆ ನಡೆಸುತ್ತಿದ್ದೇವೆ. ಘಟನೆ ನಡೆದಿರುವುದು ಚೀನಾಕ್ಕೆ ಸೇರಿದ ಜಾಗದಲ್ಲಿ. ಇದಕ್ಕಾಗಿ ಚೀನಾವನ್ನು ದೂಷಿಸಬೇಕಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p class="title">ಸಂಘರ್ಷದ ವೇಳೆ ಚೀನಾದ 43 ಸೈನಿಕರಿಗೆ ಸಾವು ನೋವು ಸಂಭವಿಸಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ‘ಗಡಿ ಭದ್ರತಾ ಪಡೆಗಳು ಪರಿಸ್ಥಿತಿಯನ್ನು ನಿಭಾಯಿಸುತ್ತಿವೆ’ ಎಂದಷ್ಟೇ ಹೇಳಿದ್ದಾರೆ.</p>.<p class="title">ಎಷ್ಟು ಯೋಧರು ಮೃತಪಟ್ಟಿದ್ದಾರೆ ಎಂದು ಭಾರತತಿಳಿಸಿದೆ. ಆದರೆ ಚೀನಾ ಏಕೆ ಸುಮ್ಮನಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸ್ಥಳೀಯ ಪರಿಸ್ಥಿತಿಯನ್ನು ಎರಡೂ ದೇಶಗಳ ಸೇನೆಗಳು ನಿಭಾಯಿಸುತ್ತಿವೆ. ಈ ಕ್ಷಣದಲ್ಲಿ ನಾನು ಏನನ್ನೂ ಹೇಳಲು ಬಯಸುವುದಿಲ್ಲ’ ಎಂದು ಲಿಜಿಯಾನ್ ಹೇಳಿದರು.</p>.<p class="title">‘ಒಟ್ಟಾರೆಯಾಗಿ ಗಡಿ ಪರಿಸ್ಥಿತಿ ಸ್ಥಿರವಾಗಿದ್ದು, ನಿಯಂತ್ರಣದಲ್ಲಿದೆ. ವಿವಾದ ಬಗೆಹರಿಸಿಕೊಳ್ಳಲು ಎರಡೂ ಕಡೆಯ ಸೇನೆ ಹಾಗೂ ರಾಜತಾಂತ್ರಿಕ ಅಧಿಕಾರಿಗಳು ಸಂವಹನದಲ್ಲಿ ತೊಡಗಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p class="title">ಮುಂದೆ ಇಂತಹ ಸಂಘರ್ಷಗಳನ್ನು ಚೀನಾ ಎದುರು ನೋಡುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>