ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ವಿ.ಕೆ.ಸಿಂಗ್‌ ಹೇಳಿಕೆ: ಪ್ರತಿಕ್ರಿಯೆ ನೀಡಲು ಚೀನಾ ನಿರಾಕರಣೆ

Last Updated 22 ಜೂನ್ 2020, 14:02 IST
ಅಕ್ಷರ ಗಾತ್ರ

ಬೀಜಿಂಗ್‌ : ಪೂರ್ವ ಲಡಾಖ್‌ನ ಗಾಲ್ವನ್‌ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್‌ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ಚೀನಾ ಸೋಮವಾರ ನಿರಾಕರಿಸಿದೆ. ಈ ವಿಷಯ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದೆ.

‘ನಾವು 20 ಯೋಧರನ್ನು ಕಳೆದುಕೊಂಡರೆ, ನಮಗಿಂತ ಎರಡುಪಟ್ಟು ಚೀನಾ ಸೈನಿಕರು ಮೃತಪಟ್ಟಿದ್ದಾರೆ’ ಎಂದು ವಿ.ಕೆ.ಸಿಂಗ್‌ ಅವರು ಶನಿವಾರ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

‘ಗಡಿಯಲ್ಲಿನ ಪರಿಸ್ಥಿತಿ ತಿಳಿಗೊಳಿಸಲು ಉಭಯ ದೇಶಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ ನಡೆಸುತ್ತಿವೆ’ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್‌ ಸುದ್ದಿಗೋಷ್ಠಿಯಲ್ಲಿ ಪುನರುಚ್ಚರಿಸಿದ್ದಾರೆ. ಆದರೆ, ಸಚಿವ ಸಿಂಗ್‌ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಗಾಲ್ವನ್‌ ಕಣಿವೆಯಲ್ಲಿ ಜೂನ್‌ 15 ರಂದು ನಡೆದ ಘರ್ಷಣೆಯ ನಂತರ ತನ್ನ ಕಡೆ ಸಂಭವಿಸಿದ ಸಾವುನೋವುಗಳ ವಿವರಗಳನ್ನು ಬಹಿರಂಗ ಪಡಿಸಲು ಬೀಜಿಂಗ್‌ ನಿರಾಕರಿಸಿದೆ. ಆದರೆ, ಚೀನಾ ಕೂಡ ಸಾವುನೋವು ಅನುಭವಿಸಿದೆ ಎಂದು ಮಾಧ್ಯಮಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT