<p><strong>ಬೀಜಿಂಗ್:</strong> ಗಡಿ ವಿವಾದ ಸೇರಿದಂತೆ ಭಾರತದೊಂದಿಗಿನ ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ತಾನು ಬದ್ಧ ಎಂದು ಚೀನಾ ಶುಕ್ರವಾರ ಹೇಳಿದೆ.</p>.<p>ಲಡಾಖ್ನ ಪೂರ್ವ ಗಡಿಯಲ್ಲಿ ಎರಡೂ ದೇಶಗಳ ಯೋಧರ ನಡುವೆ ಸಂಘರ್ಷ ನಡೆದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ಶನಿವಾರ (ಜೂನ್ 6) ಮಾತುಕತೆ ನಿಗದಿಯಾದ ಬೆನ್ನಲ್ಲೇ ಚೀನಾದಿಂದ ಈ ಹೇಳಿಕೆ ಹೊರಬಿದ್ದಿದೆ.</p>.<p>‘ಭಾರತ ಮತ್ತು ಚೀನಾ ನಡುವಿನ ಗಡಿಯಲ್ಲಿ ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಎರಡೂ ದೇಶಗಳ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ಮಾತುಕತೆ ನಡೆಯುತ್ತಿರುವ ಕುರಿತ ಪ್ರಶ್ನೆಗೆ, ‘ಗಡಿ ವಿಷಯಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾದ ಕಾರ್ಯವಿಧಾನ ಹೊಂದಿದ್ದೇವೆ. ಈ ವಿಷಯ ಕುರಿತು ಸೇನೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ನಿಗಾವಹಿಸುತ್ತೇವೆ’ ಎಂದರು.</p>.<p>ಲೆ.ಜ.ಹರಿಂದರ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಪಾಂಗ್ಯಾಂಗ್ ಸರೋವರ, ಗಾಲ್ವನ್ ಕಣಿವೆ ಹಾಗೂ ಡೆಮ್ಚೋಕ್ ಪ್ರದೇಶದಲ್ಲಿ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡುವ ಸಂಬಂಧ ಭಾರತದ ನಿಯೋಗ ಕೆಲವು ಪ್ರಸ್ತಾವಗಳನ್ನು ಮುಂದಿಡಲಿದೆ ಎಂಬ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>‘ಪ್ರಸ್ತಾವಗಳು ಏನಿರಲಿವೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ, ಈ ಮೂರು ಪ್ರದೇಶಗಳಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಬಗ್ಗೆ ಭಾರತದ ನಿಯೋಗ ಒತ್ತಡ ಹೇರುವ ನಿರೀಕ್ಷೆ ಇದೆ‘ ಎಂದು ಇವೇ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಗಡಿ ವಿವಾದ ಸೇರಿದಂತೆ ಭಾರತದೊಂದಿಗಿನ ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ತಾನು ಬದ್ಧ ಎಂದು ಚೀನಾ ಶುಕ್ರವಾರ ಹೇಳಿದೆ.</p>.<p>ಲಡಾಖ್ನ ಪೂರ್ವ ಗಡಿಯಲ್ಲಿ ಎರಡೂ ದೇಶಗಳ ಯೋಧರ ನಡುವೆ ಸಂಘರ್ಷ ನಡೆದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ಶನಿವಾರ (ಜೂನ್ 6) ಮಾತುಕತೆ ನಿಗದಿಯಾದ ಬೆನ್ನಲ್ಲೇ ಚೀನಾದಿಂದ ಈ ಹೇಳಿಕೆ ಹೊರಬಿದ್ದಿದೆ.</p>.<p>‘ಭಾರತ ಮತ್ತು ಚೀನಾ ನಡುವಿನ ಗಡಿಯಲ್ಲಿ ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಎರಡೂ ದೇಶಗಳ ಸೇನೆಯ ಹಿರಿಯ ಅಧಿಕಾರಿಗಳ ನಡುವೆ ಮಾತುಕತೆ ನಡೆಯುತ್ತಿರುವ ಕುರಿತ ಪ್ರಶ್ನೆಗೆ, ‘ಗಡಿ ವಿಷಯಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾದ ಕಾರ್ಯವಿಧಾನ ಹೊಂದಿದ್ದೇವೆ. ಈ ವಿಷಯ ಕುರಿತು ಸೇನೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ನಿಗಾವಹಿಸುತ್ತೇವೆ’ ಎಂದರು.</p>.<p>ಲೆ.ಜ.ಹರಿಂದರ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಪಾಂಗ್ಯಾಂಗ್ ಸರೋವರ, ಗಾಲ್ವನ್ ಕಣಿವೆ ಹಾಗೂ ಡೆಮ್ಚೋಕ್ ಪ್ರದೇಶದಲ್ಲಿ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡುವ ಸಂಬಂಧ ಭಾರತದ ನಿಯೋಗ ಕೆಲವು ಪ್ರಸ್ತಾವಗಳನ್ನು ಮುಂದಿಡಲಿದೆ ಎಂಬ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>‘ಪ್ರಸ್ತಾವಗಳು ಏನಿರಲಿವೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ, ಈ ಮೂರು ಪ್ರದೇಶಗಳಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಬಗ್ಗೆ ಭಾರತದ ನಿಯೋಗ ಒತ್ತಡ ಹೇರುವ ನಿರೀಕ್ಷೆ ಇದೆ‘ ಎಂದು ಇವೇ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>