<p><strong>ಬೀಜಿಂಗ್/ವುಹಾನ್:</strong> ಮಾರಕ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜನರು ಮತ್ತು ವಾಹನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಚೀನಾ ಇದುವರೆಗೆ ಒಟ್ಟು 13 ನಗರಗಳಿಗೆ ವಿಸ್ತರಿಸಿದೆ. ಇದರಿಂದ, ಅಂದಾಜು 4.1 ಕೋಟಿ ನಾಗರಿಕರ ಜನಜೀವನದ ಮೇಲೆ ಪರಿಣಾಮ ಬೀರಿದೆ.</p>.<p>ಪ್ರಮುಖವಾಗಿ ಸೋಂಕು ಕಾಣಿಸಿಕೊಂಡಿರುವ ಹುಬೇ ಪ್ರಾಂತ್ಯದ ವ್ಯಾಪ್ತಿಯಲ್ಲಿರುವ ಕ್ಸಿಯಾನಿಂಗ್, ಕ್ಸಿಯೊಗಾನ್, ಝಿಜಿಯಾಂಗ್ ನಗರಗಳಲ್ಲಿಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದುಪಡಿಸಲಾಗಿದೆ.</p>.<p>ಸುಮಾರು 5.5 ಲಕ್ಷ ಜನಸಂಖ್ಯೆಯುಳ್ಳ ಝಿಜಿಯಾಂಗ್ ನಗರದಲ್ಲಿ ಔಷಧ ಕೇಂದ್ರ ಹೊರತುಪಡಿಸಿ ಉಳಿದೆಲ್ಲ ವಾಣಿಜ್ಯ ಚಟುವಟಿಕೆ ಸ್ಥಗಿತವಾಗಿದೆ. 8 ಲಕ್ಷ ಜನಸಂಖ್ಯೆಯುಳ್ಳ ಎನ್ಷಿಯಲ್ಲಿ ಎಲ್ಲ ಮನರಂಜನಾ ಕೇಂದ್ರಗಳಿಗೆ ಬೀಗಮುದ್ರೆ ಘೋಷಿಸಲಾಗಿದೆ.ಉಳಿದಂತೆ ಕ್ಸಿಯಾಂಟೊ, ಚಿಬಿ, ಎಜೌ, ಲಿಚುಯಾನ್ ನಗರಗಳಲ್ಲಿ ನಿರ್ಬಂಧ ಹೇರಲಾಗಿದೆ.</p>.<p>ಜತೆಗೆ, ಚೀನಾದ ಮಹಾ ಗೋಡೆಯ ಕೆಲವು ಭಾಗಗಳಿಗೆ ಮತ್ತು ಇತರ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.</p>.<p>ಇನ್ನೊಂದೆಡೆ, ಸೋಂಕಿನಿಂದ 26 ಜನರು ಮೃತಪಟ್ಟಿದ್ದು, 800 ಜನರು ಬಾಧಿತರಾಗಿದ್ದಾರೆ. ವೈರಸ್ ನಿಯಂತ್ರಿಸಲು 10 ದಿನಗಳಲ್ಲಿ ಒಂದು ಸಾವಿರ ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆ ನಿರ್ಮಿಸಲು ಮುಂದಾಗಿದೆ.</p>.<p><strong>ಗಣರಾಜ್ಯೋತ್ಸವ ರದ್ದು</strong><br /><strong>ಬೀಜಿಂಗ್ (ಪಿಟಿಐ):</strong> ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬೀಜಿಂಗ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಿದೆ.</p>.<p><strong>ಭಾರತದಲ್ಲಿ 13 ಮಂದಿ ಮೇಲೆ ನಿಗಾ<br />ಮುಂಬೈ/ನವದೆಹಲಿ/ ತಿರುವನಂತಪುರ: </strong>ಚೀನಾದಿಂದ ಬಂದಿರುವ 13ಕ್ಕೂ ಹೆಚ್ಚು ವ್ಯಕ್ತಿಗಳ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. ಆದರೆ, ಇದುವರೆಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಇವರಲ್ಲಿ ಇಬ್ಬರನ್ನು ಮುಂಬೈ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಹೈದರಾಬಾದ್ ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾವಹಿಸಲಾಗಿದೆ.</p>.<p>ಕೇರಳದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಮೇಲೆ ನಿಗಾವಹಿಸಲಾಗಿದೆ. ಎರ್ನಾಕುಲಂ, ಕೊಟ್ಟಾಯಂ ಮತ್ತು ತ್ರಿಶೂರ್ನಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರೂ ಕಳೆದ ಕೆಲವು ದಿನಗಳ ಹಿಂದೆ ಚೀನಾದಿಂದ ಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇನ್ನೊಂದೆಡೆ, ಸೌದಿ ಅರೇಬಿಯಾದಲ್ಲಿ ಕೊಟ್ಟಾಯಂ ನರ್ಸ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಇವರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿಲ್ಲ. ಬದಲಿಗೆ ಎಂಇಆರ್ಎಸ್–ಸಿಒವಿ ಎನ್ನುವ ವೈರಸ್ಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಜತೆಗೆ, ವುಹಾನ್ನಿಂದ ಇತ್ತೀಚೆಗೆ ಭಾರತಕ್ಕೆ ಹಿಂತಿರುಗಿರುವ 25 ವಿದ್ಯಾರ್ಥಿಗಳ ಆರೋಗ್ಯದ ಮೇಲೆಯೂ ನಿಗಾವಹಿಸಲಾಗಿದೆ. ಈ ಬಗ್ಗೆ ಚೀನಾದಲ್ಲಿ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿತ್ತು.</p>.<p><strong>ಪ್ರವಾಸೋದ್ಯಮದ ಮೇಲೆ ಪರಿಣಾಮ</strong><br /><strong>ಲಂಡನ್:</strong> ಕೊರೊನಾ ವೈರಸ್ ಸೋಂಕು ವಿವಿಧ ದೇಶಗಳಿಗೆ ಹಬ್ಬುತ್ತಿರುವುದರಿಂದ ಜಾಗತಿಕ ಪ್ರವಾಸೋದ್ಯಮ ಕ್ಷೇತ್ರದ ಮೇಲೆಯೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.</p>.<p>ಸಂಚಾರ ವ್ಯವಸ್ಥೆಯ ಮೇಲೆ ನಿರ್ಬಂಧ ಹೇರುತ್ತಿರುವುದರಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲೆಯೇ ಪರಿಣಾಮ ಬೀರುತ್ತಿದೆ ಎಂದು ವಿಶ್ವ ಪ್ರವಾಸೋದ್ಯಮ ಮಂಡಳಿಯ ಮುಖ್ಯಸ್ಥ ಗ್ಲೊರಿಯಾ ಗ್ಯುವರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್/ವುಹಾನ್:</strong> ಮಾರಕ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜನರು ಮತ್ತು ವಾಹನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಚೀನಾ ಇದುವರೆಗೆ ಒಟ್ಟು 13 ನಗರಗಳಿಗೆ ವಿಸ್ತರಿಸಿದೆ. ಇದರಿಂದ, ಅಂದಾಜು 4.1 ಕೋಟಿ ನಾಗರಿಕರ ಜನಜೀವನದ ಮೇಲೆ ಪರಿಣಾಮ ಬೀರಿದೆ.</p>.<p>ಪ್ರಮುಖವಾಗಿ ಸೋಂಕು ಕಾಣಿಸಿಕೊಂಡಿರುವ ಹುಬೇ ಪ್ರಾಂತ್ಯದ ವ್ಯಾಪ್ತಿಯಲ್ಲಿರುವ ಕ್ಸಿಯಾನಿಂಗ್, ಕ್ಸಿಯೊಗಾನ್, ಝಿಜಿಯಾಂಗ್ ನಗರಗಳಲ್ಲಿಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದುಪಡಿಸಲಾಗಿದೆ.</p>.<p>ಸುಮಾರು 5.5 ಲಕ್ಷ ಜನಸಂಖ್ಯೆಯುಳ್ಳ ಝಿಜಿಯಾಂಗ್ ನಗರದಲ್ಲಿ ಔಷಧ ಕೇಂದ್ರ ಹೊರತುಪಡಿಸಿ ಉಳಿದೆಲ್ಲ ವಾಣಿಜ್ಯ ಚಟುವಟಿಕೆ ಸ್ಥಗಿತವಾಗಿದೆ. 8 ಲಕ್ಷ ಜನಸಂಖ್ಯೆಯುಳ್ಳ ಎನ್ಷಿಯಲ್ಲಿ ಎಲ್ಲ ಮನರಂಜನಾ ಕೇಂದ್ರಗಳಿಗೆ ಬೀಗಮುದ್ರೆ ಘೋಷಿಸಲಾಗಿದೆ.ಉಳಿದಂತೆ ಕ್ಸಿಯಾಂಟೊ, ಚಿಬಿ, ಎಜೌ, ಲಿಚುಯಾನ್ ನಗರಗಳಲ್ಲಿ ನಿರ್ಬಂಧ ಹೇರಲಾಗಿದೆ.</p>.<p>ಜತೆಗೆ, ಚೀನಾದ ಮಹಾ ಗೋಡೆಯ ಕೆಲವು ಭಾಗಗಳಿಗೆ ಮತ್ತು ಇತರ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.</p>.<p>ಇನ್ನೊಂದೆಡೆ, ಸೋಂಕಿನಿಂದ 26 ಜನರು ಮೃತಪಟ್ಟಿದ್ದು, 800 ಜನರು ಬಾಧಿತರಾಗಿದ್ದಾರೆ. ವೈರಸ್ ನಿಯಂತ್ರಿಸಲು 10 ದಿನಗಳಲ್ಲಿ ಒಂದು ಸಾವಿರ ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆ ನಿರ್ಮಿಸಲು ಮುಂದಾಗಿದೆ.</p>.<p><strong>ಗಣರಾಜ್ಯೋತ್ಸವ ರದ್ದು</strong><br /><strong>ಬೀಜಿಂಗ್ (ಪಿಟಿಐ):</strong> ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬೀಜಿಂಗ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಿದೆ.</p>.<p><strong>ಭಾರತದಲ್ಲಿ 13 ಮಂದಿ ಮೇಲೆ ನಿಗಾ<br />ಮುಂಬೈ/ನವದೆಹಲಿ/ ತಿರುವನಂತಪುರ: </strong>ಚೀನಾದಿಂದ ಬಂದಿರುವ 13ಕ್ಕೂ ಹೆಚ್ಚು ವ್ಯಕ್ತಿಗಳ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. ಆದರೆ, ಇದುವರೆಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಇವರಲ್ಲಿ ಇಬ್ಬರನ್ನು ಮುಂಬೈ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಹೈದರಾಬಾದ್ ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾವಹಿಸಲಾಗಿದೆ.</p>.<p>ಕೇರಳದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಮೇಲೆ ನಿಗಾವಹಿಸಲಾಗಿದೆ. ಎರ್ನಾಕುಲಂ, ಕೊಟ್ಟಾಯಂ ಮತ್ತು ತ್ರಿಶೂರ್ನಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರೂ ಕಳೆದ ಕೆಲವು ದಿನಗಳ ಹಿಂದೆ ಚೀನಾದಿಂದ ಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇನ್ನೊಂದೆಡೆ, ಸೌದಿ ಅರೇಬಿಯಾದಲ್ಲಿ ಕೊಟ್ಟಾಯಂ ನರ್ಸ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಇವರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿಲ್ಲ. ಬದಲಿಗೆ ಎಂಇಆರ್ಎಸ್–ಸಿಒವಿ ಎನ್ನುವ ವೈರಸ್ಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಜತೆಗೆ, ವುಹಾನ್ನಿಂದ ಇತ್ತೀಚೆಗೆ ಭಾರತಕ್ಕೆ ಹಿಂತಿರುಗಿರುವ 25 ವಿದ್ಯಾರ್ಥಿಗಳ ಆರೋಗ್ಯದ ಮೇಲೆಯೂ ನಿಗಾವಹಿಸಲಾಗಿದೆ. ಈ ಬಗ್ಗೆ ಚೀನಾದಲ್ಲಿ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿತ್ತು.</p>.<p><strong>ಪ್ರವಾಸೋದ್ಯಮದ ಮೇಲೆ ಪರಿಣಾಮ</strong><br /><strong>ಲಂಡನ್:</strong> ಕೊರೊನಾ ವೈರಸ್ ಸೋಂಕು ವಿವಿಧ ದೇಶಗಳಿಗೆ ಹಬ್ಬುತ್ತಿರುವುದರಿಂದ ಜಾಗತಿಕ ಪ್ರವಾಸೋದ್ಯಮ ಕ್ಷೇತ್ರದ ಮೇಲೆಯೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.</p>.<p>ಸಂಚಾರ ವ್ಯವಸ್ಥೆಯ ಮೇಲೆ ನಿರ್ಬಂಧ ಹೇರುತ್ತಿರುವುದರಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲೆಯೇ ಪರಿಣಾಮ ಬೀರುತ್ತಿದೆ ಎಂದು ವಿಶ್ವ ಪ್ರವಾಸೋದ್ಯಮ ಮಂಡಳಿಯ ಮುಖ್ಯಸ್ಥ ಗ್ಲೊರಿಯಾ ಗ್ಯುವರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>