ಆರಂಭದಲ್ಲಿ ಭಾರತ ಸೇನೆಯ ಕರ್ನಲ್ ಬಿ. ಸಂತೋಷ್ ಬಾಬು, ಹವಾಲ್ದಾರ್ ಪಳನಿ ಮತ್ತು ಸಿಪಾಯಿ ಓಝಾ ಹುತಾತ್ಮರಾಗಿದ್ದಾರೆ ಎಂದಷ್ಟೇ ಹೇಳಲಾಗಿತ್ತು. ಆದರೆ, ಸಂಘರ್ಷದ ಸ್ಥಳದಲ್ಲಿ ಕರ್ತವ್ಯದಲ್ಲಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇನ್ನೂ 17 ಯೋಧರು ಮೃತಪಟ್ಟಿದ್ದಾರೆ ಎಂದು ಮಂಗಳವಾರ ರಾತ್ರಿ ತಿಳಿಸಿದೆ. ಗಾಯಗೊಂಡ ಯೋಧರು ಅತಿ ಎತ್ತರದ ಪ್ರದೇಶದಲ್ಲಿ ಶೂನ್ಯ ತಾಪಮಾನಕ್ಕೆ ಒಡ್ಡಿಕೊಂಡಿದ್ದರಿಂದಾಗಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಮೂಲಕ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಮಂದಿ ಯೋಧರು ಹುತಾತ್ಮರಾಗಿರುವುದಾಗಿ ಸೇನೆ ತಿಳಿಸಿದೆ.