<p><strong>ನೇಪಾಳ :</strong> ‘ಚೀನಾ ಮತ್ತು ಇಟಲಿಗಿಂತಲೂ ಭಾರತದಿಂದ ಬಂದಿರುವ ವೈರಸ್ ಹೆಚ್ಚು ಅಪಾಯಕಾರಿ’ ಎಂದು ನೇಪಾಳ ಪ್ರಧಾನಿಕೆ.ಪಿ. ಓಲಿ ಕಿಡಿಕಾರಿದ್ದಾರೆ.</p>.<p>ಸಂಸತ್ತಿನಲ್ಲಿ ಭಾರತದ ವಿರುದ್ಧ ಟೀಕೆಗಳ ಸುರಿಮಳೆ ಗೈದಿರುವ ಅವರು,‘ನೇಪಾಳದಲ್ಲಿ ಕೊರೊನಾ ವೈರಸ್ ಹರಡಲು ಭಾರತವೇ ಕಾರಣ’ ಎಂದು ದೂಷಿಸಿದ್ದಾರೆ.</p>.<p>‘ಹೊರಗಿನಿಂದ ಬರುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಸೋಂಕು ನಿಯಂತ್ರಿಸುವುದು ಕಷ್ಟಸಾಧ್ಯವಾಗಿದೆ. ದೇಶದೊಳಗೆ ಅತಿಕ್ರಮವಾಗಿ ಪ್ರವೇಶಿಸಿದ ಭಾರತೀಯರಿಂದಲೇ ಸೋಂಕು ವ್ಯಾಪಿಸಿದೆ. ಸೂಕ್ತ ತಪಾಸಣೆ ನಡೆಸದೆ ಭಾರತದಿಂದ ಜನರನ್ನು ಕರೆತರುವ ಕೆಲವು ಸ್ಥಳೀಯ ಪ್ರತಿನಿಧಿಗಳು ಮತ್ತು ಪಕ್ಷದ ಮುಖಂಡರು ಇದಕ್ಕೆ ಹೊಣೆಗಾರರು. ಗಡಿಯ ಹೊರಗಿನ ಜನರ ಒಳನುಸುಳುವಿಕೆಯನ್ನು ತಡೆಯಲು ನಮಗೆ ಸಾಧ್ಯವಾಗಲಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಭಾರತದ ನಕ್ಷೆಯೊಳಗೆ ಸೇರಿಕೊಂಡಿರುವ ‘ಕಾಲಾಪಾನಿ’ ಮತ್ತು ‘ಲಿಪುಲೇಕ್’ ಪ್ರದೇಶಗಳನ್ನು ಮರಳಿ ಪಡೆದೇ ತೀರುತ್ತೇವೆ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.ನೇಪಾಳದಲ್ಲಿ ಈವರೆಗೆ 427 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೇಪಾಳ :</strong> ‘ಚೀನಾ ಮತ್ತು ಇಟಲಿಗಿಂತಲೂ ಭಾರತದಿಂದ ಬಂದಿರುವ ವೈರಸ್ ಹೆಚ್ಚು ಅಪಾಯಕಾರಿ’ ಎಂದು ನೇಪಾಳ ಪ್ರಧಾನಿಕೆ.ಪಿ. ಓಲಿ ಕಿಡಿಕಾರಿದ್ದಾರೆ.</p>.<p>ಸಂಸತ್ತಿನಲ್ಲಿ ಭಾರತದ ವಿರುದ್ಧ ಟೀಕೆಗಳ ಸುರಿಮಳೆ ಗೈದಿರುವ ಅವರು,‘ನೇಪಾಳದಲ್ಲಿ ಕೊರೊನಾ ವೈರಸ್ ಹರಡಲು ಭಾರತವೇ ಕಾರಣ’ ಎಂದು ದೂಷಿಸಿದ್ದಾರೆ.</p>.<p>‘ಹೊರಗಿನಿಂದ ಬರುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಸೋಂಕು ನಿಯಂತ್ರಿಸುವುದು ಕಷ್ಟಸಾಧ್ಯವಾಗಿದೆ. ದೇಶದೊಳಗೆ ಅತಿಕ್ರಮವಾಗಿ ಪ್ರವೇಶಿಸಿದ ಭಾರತೀಯರಿಂದಲೇ ಸೋಂಕು ವ್ಯಾಪಿಸಿದೆ. ಸೂಕ್ತ ತಪಾಸಣೆ ನಡೆಸದೆ ಭಾರತದಿಂದ ಜನರನ್ನು ಕರೆತರುವ ಕೆಲವು ಸ್ಥಳೀಯ ಪ್ರತಿನಿಧಿಗಳು ಮತ್ತು ಪಕ್ಷದ ಮುಖಂಡರು ಇದಕ್ಕೆ ಹೊಣೆಗಾರರು. ಗಡಿಯ ಹೊರಗಿನ ಜನರ ಒಳನುಸುಳುವಿಕೆಯನ್ನು ತಡೆಯಲು ನಮಗೆ ಸಾಧ್ಯವಾಗಲಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಭಾರತದ ನಕ್ಷೆಯೊಳಗೆ ಸೇರಿಕೊಂಡಿರುವ ‘ಕಾಲಾಪಾನಿ’ ಮತ್ತು ‘ಲಿಪುಲೇಕ್’ ಪ್ರದೇಶಗಳನ್ನು ಮರಳಿ ಪಡೆದೇ ತೀರುತ್ತೇವೆ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.ನೇಪಾಳದಲ್ಲಿ ಈವರೆಗೆ 427 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>