ಪಟ್ಟಣದ ಬಸವಣ್ಣದೇವರ ಮಠದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ನಾನು ಕ್ಷೇತ್ರಕ್ಕೆ ಹೊಸಬ ಎಂದು ಪ್ರತಿಪಕ್ಷಗಳ ಮುಖಂಡರು ಅಪಪ್ರಚಾರ ಮಾಡಿದ್ದರು. ಕಾರ್ಯಕರ್ತರ ಪರಿಶ್ರಮದಿಂದ 45 ಸಾವಿರ ಮತಗಳನ್ನು ಪಡೆಯುವ ಮೂಲಕ ಅವರಿಗೆ ತಕ್ಕ ಉತ್ತರ ನೀಡಲಾಗಿದೆ’ ಎಂದರು.