ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿ ಮುಂದೆ ‘ಪದ್ಮಾವತ್‌’ ಪ್ರದರ್ಶನ ಇಂದು

Last Updated 4 ಫೆಬ್ರುವರಿ 2018, 20:04 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ಹೈಕೋರ್ಟ್‌ ನ್ಯಾಯಮೂರ್ತಿ ಸಂದೀಪ್‌ ಮೆಹ್ತಾ ಹಾಗೂ ನ್ಯಾಯಾಂಗದ ಇತರ ಅಧಿಕಾರಿಗಳಿಗಾಗಿ ಸೋಮವಾರ ಜೈಪುರದ ಚಿತ್ರಮಂದಿರವೊಂದರಲ್ಲಿ ‘ಪದ್ಮಾವತ್‌’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.

ಡೀಡ್ವಣಾ ಪೊಲೀಸ್‌ ಠಾಣೆಯಲ್ಲಿ 2017ರಲ್ಲಿ ನಟಿ ದೀಪಿಕಾ ಪಡುಕೋಣೆ, ನಟ ರಣವೀರ್‌ ಸಿಂಗ್‌ ಮತ್ತು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಚಿತ್ರದ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಚಿತ್ರ ಪ್ರದರ್ಶನ ಆಯೋಜಿಸಲಾಗಿದೆ.

ಚಿತ್ರ ಪ್ರದರ್ಶನಕ್ಕಾಗಿ ಸ್ಥಳೀಯ ಆಡಳಿತ ಭದ್ರತಾ ವ್ಯವಸ್ಥೆ ಕೈಗೊಂಡಿದೆ.

‘ನ್ಯಾಯದ ಬಗ್ಗೆ ತೀರ್ಮಾನ ಮಾಡಬೇಕಾದರೆ ಚಿತ್ರ ವೀಕ್ಷಿಸಲೇ ಬೇಕು’ ಎಂದು ನ್ಯಾಯಮೂರ್ತಿ ಮೆಹ್ತಾ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT