<p><strong>ವಾಷಿಂಗ್ಟನ್: </strong>ಪೌರತ್ವ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಅಮೆರಿಕ ಪ್ರತಿಪಾದಿಸಿದೆ.</p>.<p>ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡಿದ್ದ ದಕ್ಷಿಣ ಮತ್ತು ಕೇಂದ್ರ ಏಷ್ಯಾ ವಿಭಾಗದ ವಿದೇಶಾಂಗ ಸಹಾಯಕ ಕಾರ್ಯದರ್ಶಿ ಅಲೈಸ್ ವೆಲ್ಸ್, ಈ ಕಾಯ್ದೆ ವಿರೋಧಿಸಿ ಭಾರತದಲ್ಲಿ ನಡೆದಿರುವ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದ್ದಾರೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಭಾರತ ಭೇಟಿ ಅವಕಾಶ ನೀಡಿತು. ಈ ಕಾಯ್ದೆಯು ಪ್ರಜಾಪ್ರಭುತ್ವ ರೀತಿಯಲ್ಲಿ ಪರಿಶೀಲನೆಗೆ ಒಳಪಡುತ್ತಿದೆ.</p>.<p>ಈ ಬಗ್ಗೆ ವಿರೋಧ ಪಕ್ಷಗಳು, ಮಾಧ್ಯಮಗಳು, ನ್ಯಾಯಾಲಯಗಳು ಮತ್ತು ಬೀದಿಗಳಲ್ಲಿ ಹೋರಾಟ ನಡೆಸುವ ಮೂಲಕ ಚರ್ಚೆ ನಡೆಯುತ್ತಿದೆ. ಒಟ್ಟಾರೆಯಾಗಿ, ಈ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ತತ್ವವನ್ನು ಅಳವಡಿಸಿಕೊಳ್ಳಬೇಕು ಎನ್ನುವುದನ್ನು ನಾವು ಒತ್ತಾಯಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿರುವ ವೆಲ್ಸ್, ‘ಯಾವುದೇ ಆರೋಪ ಇಲ್ಲದೆಯೇ ಬಂಧಿಸಿಡಲಾಗಿರುವ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಮತ್ತೆ ಆರಂಭವಾಗಿದೆ. ಆದರೆ, ನಮ್ಮ ರಾಜತಾಂತ್ರಿಕರಿಗೂ ಕಾಶ್ಮೀರ ಭೇಟಿಗೆ ನಿರಂತರ ಅವಕಾಶ ನೀಡಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>ಪೌರತ್ವ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಅಮೆರಿಕ ಪ್ರತಿಪಾದಿಸಿದೆ.</p>.<p>ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡಿದ್ದ ದಕ್ಷಿಣ ಮತ್ತು ಕೇಂದ್ರ ಏಷ್ಯಾ ವಿಭಾಗದ ವಿದೇಶಾಂಗ ಸಹಾಯಕ ಕಾರ್ಯದರ್ಶಿ ಅಲೈಸ್ ವೆಲ್ಸ್, ಈ ಕಾಯ್ದೆ ವಿರೋಧಿಸಿ ಭಾರತದಲ್ಲಿ ನಡೆದಿರುವ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದ್ದಾರೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಭಾರತ ಭೇಟಿ ಅವಕಾಶ ನೀಡಿತು. ಈ ಕಾಯ್ದೆಯು ಪ್ರಜಾಪ್ರಭುತ್ವ ರೀತಿಯಲ್ಲಿ ಪರಿಶೀಲನೆಗೆ ಒಳಪಡುತ್ತಿದೆ.</p>.<p>ಈ ಬಗ್ಗೆ ವಿರೋಧ ಪಕ್ಷಗಳು, ಮಾಧ್ಯಮಗಳು, ನ್ಯಾಯಾಲಯಗಳು ಮತ್ತು ಬೀದಿಗಳಲ್ಲಿ ಹೋರಾಟ ನಡೆಸುವ ಮೂಲಕ ಚರ್ಚೆ ನಡೆಯುತ್ತಿದೆ. ಒಟ್ಟಾರೆಯಾಗಿ, ಈ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ತತ್ವವನ್ನು ಅಳವಡಿಸಿಕೊಳ್ಳಬೇಕು ಎನ್ನುವುದನ್ನು ನಾವು ಒತ್ತಾಯಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿರುವ ವೆಲ್ಸ್, ‘ಯಾವುದೇ ಆರೋಪ ಇಲ್ಲದೆಯೇ ಬಂಧಿಸಿಡಲಾಗಿರುವ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಮತ್ತೆ ಆರಂಭವಾಗಿದೆ. ಆದರೆ, ನಮ್ಮ ರಾಜತಾಂತ್ರಿಕರಿಗೂ ಕಾಶ್ಮೀರ ಭೇಟಿಗೆ ನಿರಂತರ ಅವಕಾಶ ನೀಡಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>