‘ವಿಶ್ವಸಂಸ್ಥೆಯಲ್ಲಿ ಒಳಿತು ಮತ್ತು ಕೆಡುಕು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ದೀಪಾವಳಿ ಸಂದರ್ಭದಲ್ಲಿ ಕೆಟ್ಟದ್ದರ ಮೇಲೆ ಒಳ್ಳೆಯದು ಜಯಭೇರಿ ಬಾರಿಸುವುದರ ಸಂಕೇತವಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡುತ್ತಿರುವುದಕ್ಕೆ ಧನ್ಯವಾದಗಳು’ ಎಂದು ವಿಶ್ವಸಂಸ್ಥೆಗೆ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಸೈಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ.