<p><strong>ನ್ಯೂಯಾರ್ಕ್:</strong>ವಿಶ್ವಸಂಸ್ಥೆ ಪ್ರಧಾನ ಕಚೇರಿ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24ರಂದು 'ಗಾಂಧಿ ಸೋಲಾರ್ ಪಾರ್ಕ್' ಉದ್ಘಾಟಿಸಲಿದ್ದಾರೆ.</p>.<p>ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ₹ 71.04 ಕೋಟಿ ಮೌಲ್ಯದ ಸೋಲಾರ್ ಪ್ಯಾನಲ್ ಅನ್ನು ಭಾರತ ಉಡುಗೊರೆಯಾಗಿ ನೀಡಿದೆ. ಇದರ ಗರಿಷ್ಠ 50 ಕಿಲೋ ವಾಟ್. ಈ ಸಂದರ್ಭದಲ್ಲಿ ವಿಶ್ವಸಂಸ್ಥೆ ವಿಶೇಷ ಅಂಚೆ ಚೀಟಿಯನ್ನು ಮೋದಿ ಬಿಡುಗಡೆ ಮಾಡಲಿದ್ದಾರೆ.</p>.<p>‘ಇದು ಮೊದಲ ಪ್ರಯತ್ನ. ಇಲ್ಲಿ 193 ಸೌರ ಫಲಕಗಳಿದ್ದು,ವಿಶ್ವಸಂಸ್ಥೆಯ ಎಲ್ಲ 193 ಸದಸ್ಯ ರಾಷ್ಟ್ರಗಳನ್ನು ಪ್ರತಿಬಿಂಬಿಸುತ್ತದೆ’ ಎಂದುವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ತಿಳಿಸಿದರು.</p>.<p>‘ನವೀಕರಿಸಬಹುದಾದ ಇಂಧನ ಮತ್ತು ಹವಾಮಾನ ಬದಲಾವಣೆಯ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚೆ ನಡೆಯುತ್ತಲೇ ಇರುತ್ತದೆ. ಈ ಸಣ್ಣ ಪ್ರಯತ್ನದ ಮೂಲಕ ಮಾತುಕತೆಯನ್ನು ಮೀರಿದ ಕಾರ್ಯದ ಬಗೆಗಿನ ಇಚ್ಛಾಶಕ್ತಿಯನ್ನು ಭಾರತ ಪ್ರದರ್ಶಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಒಪ್ಪಂದಕ್ಕೆ ಭಾರತ ಬದ್ಧವಾಗಿದ್ದು, ಸೌರ ಉದ್ಯಾನವನ ಇದಕ್ಕೆ ಉದಾಹರಣೆಯಾಗಿದೆ’ ಎಂದರು. </p>.<p>‘30 ಟನ್ ಕಲ್ಲಿದ್ದಲಿನಿಂದ ಆಗುವಷ್ಟು ವಿದ್ಯುತ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಈ ಸೌರ ಪಾರ್ಕ್ ಹೊಂದಿದೆ. ಈ ಉದ್ಯಾನದಲ್ಲಿಒಂದು ಸಾವಿರ ಮರಗಳನ್ನು ಬೆಳೆಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್:</strong>ವಿಶ್ವಸಂಸ್ಥೆ ಪ್ರಧಾನ ಕಚೇರಿ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24ರಂದು 'ಗಾಂಧಿ ಸೋಲಾರ್ ಪಾರ್ಕ್' ಉದ್ಘಾಟಿಸಲಿದ್ದಾರೆ.</p>.<p>ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ₹ 71.04 ಕೋಟಿ ಮೌಲ್ಯದ ಸೋಲಾರ್ ಪ್ಯಾನಲ್ ಅನ್ನು ಭಾರತ ಉಡುಗೊರೆಯಾಗಿ ನೀಡಿದೆ. ಇದರ ಗರಿಷ್ಠ 50 ಕಿಲೋ ವಾಟ್. ಈ ಸಂದರ್ಭದಲ್ಲಿ ವಿಶ್ವಸಂಸ್ಥೆ ವಿಶೇಷ ಅಂಚೆ ಚೀಟಿಯನ್ನು ಮೋದಿ ಬಿಡುಗಡೆ ಮಾಡಲಿದ್ದಾರೆ.</p>.<p>‘ಇದು ಮೊದಲ ಪ್ರಯತ್ನ. ಇಲ್ಲಿ 193 ಸೌರ ಫಲಕಗಳಿದ್ದು,ವಿಶ್ವಸಂಸ್ಥೆಯ ಎಲ್ಲ 193 ಸದಸ್ಯ ರಾಷ್ಟ್ರಗಳನ್ನು ಪ್ರತಿಬಿಂಬಿಸುತ್ತದೆ’ ಎಂದುವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ತಿಳಿಸಿದರು.</p>.<p>‘ನವೀಕರಿಸಬಹುದಾದ ಇಂಧನ ಮತ್ತು ಹವಾಮಾನ ಬದಲಾವಣೆಯ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚೆ ನಡೆಯುತ್ತಲೇ ಇರುತ್ತದೆ. ಈ ಸಣ್ಣ ಪ್ರಯತ್ನದ ಮೂಲಕ ಮಾತುಕತೆಯನ್ನು ಮೀರಿದ ಕಾರ್ಯದ ಬಗೆಗಿನ ಇಚ್ಛಾಶಕ್ತಿಯನ್ನು ಭಾರತ ಪ್ರದರ್ಶಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಒಪ್ಪಂದಕ್ಕೆ ಭಾರತ ಬದ್ಧವಾಗಿದ್ದು, ಸೌರ ಉದ್ಯಾನವನ ಇದಕ್ಕೆ ಉದಾಹರಣೆಯಾಗಿದೆ’ ಎಂದರು. </p>.<p>‘30 ಟನ್ ಕಲ್ಲಿದ್ದಲಿನಿಂದ ಆಗುವಷ್ಟು ವಿದ್ಯುತ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಈ ಸೌರ ಪಾರ್ಕ್ ಹೊಂದಿದೆ. ಈ ಉದ್ಯಾನದಲ್ಲಿಒಂದು ಸಾವಿರ ಮರಗಳನ್ನು ಬೆಳೆಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>