ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 200 ಪ್ರಯಾಣಿಕರು ಇದ್ದ ಮೂರು ಬೋಗಿಗಳಿಗೆ ಹಾನಿಯಾಗಿದೆ. ವೇಗವಾಗಿ ಚಲಿಸುತ್ತಿದ್ದ ರೈಲ್ವೆ ಬೋಗಿಯಲ್ಲಿ ಸೀಮೆ ಎಣ್ಣೆಯೂ ಇದ್ದುದರಿಂದ ಬೆಂಕಿ ಬೇಗನೇ ಹರಡಿತು. ಗ್ಯಾಸ್ ಸ್ಟೌ ಬಳಸಿ ಅಡುಗೆ ಮಾಡದಂತೆ ರೈಲ್ವೆ ಸುರಕ್ಷತಾ ಸಿಬ್ಬಂದಿ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದರು. ಆ ಸಂದರ್ಭದಲ್ಲಿ ಸ್ಟೌ ನಂದಿಸಿದ ಪ್ರಯಾಣಿಕರು ಸಿಬ್ಬಂದಿ ಅಲ್ಲಿಂದ ತೆರಳಿದ ಕೂಡಲೇ ಮತ್ತೆ ಸ್ಟೌ ಹಚ್ಚಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆ ಕುರಿತು ತನಿಖೆ ನಡೆಸುವುದಾಗಿ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.