ಭಾನುವಾರ ನಿರಂತರವಾಗಿ ಪ್ರತಿಭಟನಾ ರ್ಯಾಲಿಗಳು ನಡೆದವು. ಈ ನಡುವೆ ಪೊಲೀಸರು ಮತ್ತು ಪ್ರತಿಭ
ಟನಕಾರರ ನಡುವೆ ಮಾತಿನ ಚಕಿಮಕಿಯೂ ನಡೆಯಿತು. ನ. 24ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಪೊಲೀಸ್ ಬ್ಯಾರಿಕೇಡ್ ಮುರಿಯಲು ಯತ್ನಿಸಿದ್ದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಅಶ್ರುವಾಯು ಪ್ರಯೋಗವನ್ನು ವಿರೋಧಿಸಿ ಕೆಲಕಾಲ ಪ್ರತಿಭಟನೆ ನಡೆಯಿತು. ‘ಮತ್ತೆ ಅಶ್ರುವಾಯು ಪ್ರಯೋಗ ಬೇಡ: ಮಕ್ಕಳನ್ನು ರಕ್ಷಿಸಿ’ ಎನ್ನುವ ಘೋಷಣಾ ಫಲಕಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.